September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ಇಲ್ಲಿ ಜ. 6 ರಂದು ಸಂಸ್ಥಾಪಕರ ದಿನಾಚರಣೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ಸ್ವತಃ ರಚಿಸಿದ ಹಾಡನ್ನು ಎಲ್ಲಾ ಶಿಕ್ಷಕರು ಹಾಡುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಮಾತನಾಡಿ, ಸಂಸ್ಥಾಪಕರಾದ ಗಿರೀಶ್ ಕೆ.ಎಚ್. ಅವರು ಹಾಕಿದ ಗಟ್ಟಿಯಾದ ಬುನಾದಿ ಇಂದು ಶಾಲೆ ಇಷ್ಟು ಎತ್ತರ ಬೆಳೆದಿದೆ. ಪುತ್ರನಾಗಿ ಹೆಮ್ಮೆಯ ತಂದೆ, ಶಿಷ್ಯನಾಗಿ ಎತ್ತರ ಸ್ಥಾನದಲ್ಲಿ ಗುರು, ತಿದ್ದಿ ದಾರಿತೋರಿಸುವ ಮಾರ್ಗದರ್ಶನದಿಂದ ಎಸ್‌ಎಸ್‌ಎಲ್‌ಸಿ12 ಬಾರಿ ಹಾಗೂ ಪಿಯುಸಿಯಲ್ಲಿ ಸತತ 4 ವರ್ಷ ಶೇ. 100 ಫಲಿತಾಂಶ ಬರಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಂಸ್ಥಾಪಕ ಗಿರೀಶ್ ಕೆ.ಎಚ್. ಅವರು ಅನಿಸಿಕೆ ವ್ಯಕ್ತಪಡಿಸಿ, ಗುಡ್ಡದಂತಿದ್ದ ಈ ಪ್ರದೇಶ ಪುಟ್ಟ ಮಕ್ಕಳ ನಿರಂತರ ಪಾದಸ್ಪರ್ಶದಿಂದ ಇದು ಬೆಳಗಿದೆ. ಸಂಸ್ಥೆಯು ರಾಜ್ಯ, ರಾಷ್ಟಮಟ್ಡದ ಸಾಧನೆಗೆ ಇಲ್ಲಿ ವಿದ್ಯೆ ನೀಡಿದ ಶಿಕ್ಷಕರು ಹಾಗೂ ವಿದ್ಯೆ ಪಡೆದ ವಿದ್ಯಾರ್ಥಿಗಳೇ ಕಾರಣ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್, ಕುಂಭ ಶ್ರೀ ವೈಭವ ಸಮಿತಿಯ ಅಧ್ಯಕ್ಷ ಅಶ್ವಿತ್ ಕುಲಾಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಮನೋಜ್, ಶಾಲಾ ಶೈಕ್ಷಣಿಕ ಸಲಹೆಗಾರ ಶ್ರೀಮತಿ ಉಷಾ ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕರಾದ ಅಭಿಲಾಶ್ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಅಕ್ಷತಾ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್ ವಂದಿಸಿದರು.

Related posts

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya
error: Content is protected !!