September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

ಉಜಿರೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನಿಡಿಗಲ್-ಕಲ್ಮಂಜ ಇದರ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಲ್ಮಂಜ ಇವರ ಸಹಕಾರದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಜ.6ರಂದು ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಜರುಗಿತು.

ಬೆಳಿಗ್ಗೆ ಗಣಹೋಮ, ಸತ್ಯದೇವತೆಗೆ ತಂಬಿಲಸೇವೆ, ಭಜನಾ ಸೇವೆ, ಅಪರಾಹ್ನ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ, ರಾತ್ರಿ ಮಹಾಪೂಜೆ, ಭಜನಾ ಮಂಗಳ, ಪ್ರಸಾದ ವಿತರಣೆ ನೆರವೇರಿ ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರದ ಮಕ್ಕಳಿಂದ ಅರುಣ್ ಕುಮಾರ್ ಕಲ್ಮಂಜ ಇವರ ನಿರ್ದೇಶನದಲ್ಲಿ ಶೇಖರ್ ಟಿ., ಮಂಜುಶ್ರೀ ಸಾರಥ್ಯದಲ್ಲಿ ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ ಜರುಗಿತು.

ಈ ವೇಳೆ ಉಜಿರೆ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್ ಟಿ ಮತ್ತು ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಯಕ್ಷಗಾನ ಪ್ರೋತ್ಸಾಹಕ ಭುಜಬಲಿ ಧರ್ಮಸ್ಥಳ, ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ಹೆಗ್ಡೆ, ಕೋಶಾಧಿಕಾರಿ ಮುಕೇಶ್ ಗೌಡ, ಕಾರ್ಯದರ್ಶಿ ಹರೀಶ್ ಡಿ., ಶ್ವೇತಾ ನಾಗೇಶ್ ಆಚಾರ್ಯ, ಕಿರಣ್, ಕೃಷ್ಣಪ್ಪ ಟೈಲರ್, ಪ್ರಜ್ಞಾ, ಸಹನಾ, ಶ್ವೇತಾ, ಶಶಿಧರ ಮಡಿವಾಳ, ನಾಗೇಶ್ ಆಚಾರ್ಯ, ಹರೀಶ್ ಮಡಿವಾಳ, ಶ್ರೀ ಕ್ಷೇ ಧ.ಗ್ರಾ.ಯೋ, ಕಲ್ಮಂಜ ವಿಭಾಗದ ಸೇವಾಪ್ರತಿನಿಧಿ ದಿಶಾ, ಕಲ್ಮಂಜ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಬಿ.ಎನ್. ಹಮೀದ್ ಉಪಸ್ಥಿತರಿದ್ದರು.

Related posts

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya
error: Content is protected !!