March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ, ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ, ಅಮೃತವರ್ಷಿಣಿ ಮಹಿಳಾ ಸಂಜೀವಿನಿ ಒಕ್ಕೂಟ ನಡ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯನ್ನು ಗುರಿಪಳ್ಳ ಹಾಲು ಉತ್ಪಾದಕದ ಸಹಕಾರಿ ಸಂಘದ ಪ್ರಾಂಗಣದಲ್ಲಿ ಜ.7 ರಂದು ನಡೆಯಿತು.

ಉಜಿರೆಯ ಕೃಷಿ ಸಖಿ ಭಾಗೀರಥಿ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶ ನೈಸರ್ಗಿಕ ಕೃಷಿ ಯೋಜನೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳು ಹಾಗೂ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ಜಯಾನಂದ ಮಾತಾಡಿ ನಮ್ಮ ಕೃಷಿ ಸಖಿಯರು ಅಲ್ಲಲ್ಲಿ ಇಂತಹ ರೈತ ತರಬೇತಿ ಆಯೋಜನೆ ಮಾಡಿ ರೈತರಿಗೆ ವೈಜ್ಞಾನಿಕವಾಗಿ ಕೃಷಿ ಮಾಡುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ ನೀವೆಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ರೈತ ತರಬೇತಿ ಕೇಂದ್ರದ ADA ರಮೇಶ್ ತರಬೇತಿ ಕೇಂದ್ರದಲ್ಲಿ ನಡೆಯುವ ತರಬೇತಿಗಳಿಗೆ ರೈತರು ಭಾಗವಹಿಸುವಂತೆ ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಪ್ರಭಾಕರ ಮಯ್ಯ ಅಡಿಕೆಗೆ ಬರುವ ರೋಗಗಳು ಅದರ ಪರಿಹಾರ ರೋಗ ಬರದಂತೆ ವಹಿಸಬೇಕಾದ ಮುನ್ನೆಚ್ಚರಿಕೆಗಳು ಸಾವಯವ ಕೃಷಿ ಹಾಗೂ ಅದರಿಂದ ಆಗುವ ಪ್ರಯೋಜನ ಗಳ ಬಗ್ಗೆ ಮಾಹಿತಿ ನೀಡಿ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು. ಎರಡು ಒಕ್ಕೂಟದ ಕೃಷಿ ಸಖಿಯರಾದ ಭಾಗೀರಥಿ ಮಲ್ಲಿಕಾ ಹಾಗೂ ಪಶು ಸಖಿ ಏಕಲತಾ ಪ್ರೇಮಾ ಜೀವಾಮೃತ ಮಾಡುವ ವಿಧಾನವನ್ನು ವಿವರಿಸಿ ಪ್ರಾತ್ಯಕ್ಷಿಕೆಯ ಮೂಲಕ ಮಾಡಿ ತೋರಿಸಿದರು. ಎನ್.ಎಮ್.ಎಫ್ ಯೋಜನೆ ಫಲಾನುಭವಿಗಳಿಗೆ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗುರಿಪಳ್ಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಮಿತಾ, ಎರಡು ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Related posts

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!