July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ, ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ, ಅಮೃತವರ್ಷಿಣಿ ಮಹಿಳಾ ಸಂಜೀವಿನಿ ಒಕ್ಕೂಟ ನಡ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯನ್ನು ಗುರಿಪಳ್ಳ ಹಾಲು ಉತ್ಪಾದಕದ ಸಹಕಾರಿ ಸಂಘದ ಪ್ರಾಂಗಣದಲ್ಲಿ ಜ.7 ರಂದು ನಡೆಯಿತು.

ಉಜಿರೆಯ ಕೃಷಿ ಸಖಿ ಭಾಗೀರಥಿ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶ ನೈಸರ್ಗಿಕ ಕೃಷಿ ಯೋಜನೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳು ಹಾಗೂ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ಜಯಾನಂದ ಮಾತಾಡಿ ನಮ್ಮ ಕೃಷಿ ಸಖಿಯರು ಅಲ್ಲಲ್ಲಿ ಇಂತಹ ರೈತ ತರಬೇತಿ ಆಯೋಜನೆ ಮಾಡಿ ರೈತರಿಗೆ ವೈಜ್ಞಾನಿಕವಾಗಿ ಕೃಷಿ ಮಾಡುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ ನೀವೆಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ರೈತ ತರಬೇತಿ ಕೇಂದ್ರದ ADA ರಮೇಶ್ ತರಬೇತಿ ಕೇಂದ್ರದಲ್ಲಿ ನಡೆಯುವ ತರಬೇತಿಗಳಿಗೆ ರೈತರು ಭಾಗವಹಿಸುವಂತೆ ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಪ್ರಭಾಕರ ಮಯ್ಯ ಅಡಿಕೆಗೆ ಬರುವ ರೋಗಗಳು ಅದರ ಪರಿಹಾರ ರೋಗ ಬರದಂತೆ ವಹಿಸಬೇಕಾದ ಮುನ್ನೆಚ್ಚರಿಕೆಗಳು ಸಾವಯವ ಕೃಷಿ ಹಾಗೂ ಅದರಿಂದ ಆಗುವ ಪ್ರಯೋಜನ ಗಳ ಬಗ್ಗೆ ಮಾಹಿತಿ ನೀಡಿ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು. ಎರಡು ಒಕ್ಕೂಟದ ಕೃಷಿ ಸಖಿಯರಾದ ಭಾಗೀರಥಿ ಮಲ್ಲಿಕಾ ಹಾಗೂ ಪಶು ಸಖಿ ಏಕಲತಾ ಪ್ರೇಮಾ ಜೀವಾಮೃತ ಮಾಡುವ ವಿಧಾನವನ್ನು ವಿವರಿಸಿ ಪ್ರಾತ್ಯಕ್ಷಿಕೆಯ ಮೂಲಕ ಮಾಡಿ ತೋರಿಸಿದರು. ಎನ್.ಎಮ್.ಎಫ್ ಯೋಜನೆ ಫಲಾನುಭವಿಗಳಿಗೆ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗುರಿಪಳ್ಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಮಿತಾ, ಎರಡು ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Related posts

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya
error: Content is protected !!