23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು.

ಇತ್ತೀಚೆಗೆ ನಡೆದ ಕೋಟೆ ತರವಾಡಿನ ಧರ್ಮ ನೇಮೋತ್ಸವದಲ್ಲಿ ಡಾ. ರವೀಶ್ ಪಡುಮಲೆ ಅವರು ದೈವ ನರ್ತನ ಮಾಡಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಟುಂಬದವರು ಬಂಗಾರದ ಉಂಗುರ ತೊಡಿಸುವ ಮೂಲಕ ಗೌರವಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೋಟೆ ಗಣೇಶ್ ರೈ ನಾಡಜೆ, ಜಯರಾಮ ರೈ ಮೂಡಂಬೈಲು, ಬಾಲಕೃಷ್ಣ ರೈ ಸುಬ್ರಹ್ಮಣ್ಯ, ನಾರಾಯಣ ರೈ ಮೂಡಂಬೈಲ್, ಪುಷ್ಪರಾಜ್ ಶೆಟ್ಟಿ ಕೋಟೆ, ಸುಬ್ಬಯ್ಯ ರೈ ಕಡಾರ್, ರಮೇಶ್ ರೈ ನೆಟ್ಟಣಿಗೆ, ಲೋಹಿತ್ ಶೆಟ್ಟಿ ಡೆಪ್ಪಾಜೆ, ಪ್ರದೀಪ್ ರೈ ಕಡಬ, ಪ್ರಮೋದ್ ರೈ ಕಡಬ, ಸುಕೇಶ್ ರೈ ಮೊಡಪ್ಪಾಡಿ ಹಾಗೂ ಕೋಟೆ ಬಾರಿಕೆ ಮೂಲಕೋಟೆ ತರವಾಡು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya
error: Content is protected !!