22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

ಉಜಿರೆ: ‘ಭಾರತ್‌ಗ್ಯಾನ್’ ಮೂಲಕ ಭಾರತೀಯ ನಾಗರೀಕತೆಯ ಜ್ಞಾನದ ವ್ಯಾಪಕ ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಸರುವಾಸಿಯಾದ, ಲೇಖಕ, ಉಪನ್ಯಾಸಕ, ಚಲನಚಿತ್ರ ನಿರ್ಮಾಪಕ, ಭಾರತದ ಸಂಪ್ರದಾಯ, ಸಂಸ್ಕೃತಿ, ಜಾಗತಿಕ ಕೊಡುಗೆಗಳ ಅಪಾರ ಜ್ಞಾನ ಹೊಂದಿರುವ ಡಾ. ಡಿ.ಕೆ ಹರಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದರು.

ಭೇಟಿ ಬಳಿಕ ವಿವಿಧ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಗ್ಗಡೆಯವರು ಸಮಾಜದ ಬಗ್ಗೆ ಅತ್ಯಂತ ಕಾಳಜಿ ಹೊಂದಿರುವ ಕಾರಣವೇ ಗ್ರಾಮೀಣ ಭಾಗದಲ್ಲಿ ಇಂತಹ ಆಸ್ಪತ್ರೆಯ ಮೂಲಕ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡಲಾಗುತ್ತಿದೆ ಎಂದರು. ಹೈಟೆಕ್ ಸೌಲಭ್ಯವಿರುವ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಸೇವೆ, ಆಸ್ಪತ್ರೆಯ ಶುಚಿತ್ವ, ಇಲ್ಲಿರುವ ಮೂಲಭೂತ ಸೌಲಭ್ಯಗಳು ಮತ್ತು ಲಭ್ಯವಿರುವ ವೈದ್ಯಕೀಯ ಸೇವೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಡಾ. ಡಿ.ಕೆ ಹರಿ ದಂಪತಿಗಳನ್ನು ಸ್ವಾಗತಿಸಿ ಬರಮಾಡಿಕೊಂಡರು. ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya
error: Content is protected !!