September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

ಉಜಿರೆ: ‘ಭಾರತ್‌ಗ್ಯಾನ್’ ಮೂಲಕ ಭಾರತೀಯ ನಾಗರೀಕತೆಯ ಜ್ಞಾನದ ವ್ಯಾಪಕ ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಸರುವಾಸಿಯಾದ, ಲೇಖಕ, ಉಪನ್ಯಾಸಕ, ಚಲನಚಿತ್ರ ನಿರ್ಮಾಪಕ, ಭಾರತದ ಸಂಪ್ರದಾಯ, ಸಂಸ್ಕೃತಿ, ಜಾಗತಿಕ ಕೊಡುಗೆಗಳ ಅಪಾರ ಜ್ಞಾನ ಹೊಂದಿರುವ ಡಾ. ಡಿ.ಕೆ ಹರಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದರು.

ಭೇಟಿ ಬಳಿಕ ವಿವಿಧ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಗ್ಗಡೆಯವರು ಸಮಾಜದ ಬಗ್ಗೆ ಅತ್ಯಂತ ಕಾಳಜಿ ಹೊಂದಿರುವ ಕಾರಣವೇ ಗ್ರಾಮೀಣ ಭಾಗದಲ್ಲಿ ಇಂತಹ ಆಸ್ಪತ್ರೆಯ ಮೂಲಕ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡಲಾಗುತ್ತಿದೆ ಎಂದರು. ಹೈಟೆಕ್ ಸೌಲಭ್ಯವಿರುವ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಸೇವೆ, ಆಸ್ಪತ್ರೆಯ ಶುಚಿತ್ವ, ಇಲ್ಲಿರುವ ಮೂಲಭೂತ ಸೌಲಭ್ಯಗಳು ಮತ್ತು ಲಭ್ಯವಿರುವ ವೈದ್ಯಕೀಯ ಸೇವೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಡಾ. ಡಿ.ಕೆ ಹರಿ ದಂಪತಿಗಳನ್ನು ಸ್ವಾಗತಿಸಿ ಬರಮಾಡಿಕೊಂಡರು. ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya
error: Content is protected !!