ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ನೆಲಹಾಸು ಗ್ರಾನೈಟ್ ಕೆಲಸಕ್ಕೆ ಧನ ಸಹಾಯ ನೀಡುವ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ರೂ.1 ಲಕ್ಷ ದೇಣಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೊರಗಪ್ಪ ಪೂಜಾರಿ, ಜೀರ್ಣೋದ್ದಾರ ಕಾರ್ಯಾಧ್ಯಕ್ಷ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಧ್ಯಕ್ಷರಾದ ಸುನಿಲ್ ಗೌಡ ಅನವು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್, ಪಂಚಾಯತ್ ಸದಸ್ಯರಾದ ಉಮಾವತಿ ಕೋಡಿಯಡ್ಕ ಟ್ರಸ್ಟಿನ ಕಾರ್ಯದರ್ಶಿ ಧರ್ನಪ್ಪ ನಾಯ್ಕ ಆನಡ್ಕ, ಹಾಗೂ ವಿನೋದರ ಸಾಲ್ಯಾನ್, ಸತೀಶ್ ಪಿಲಿಕಲ್, ಸುಧಾಕರ ಪ್ರಭು, ಸುರೇಂದ್ರ ಪೂಜಾರಿ, ವಿವಿಧ ಸಮಿತಿ ಮತ್ತು ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ಸ್ವಚ್ಛ ಸಂಕೀರ್ಣದಲ್ಲಿ ಸಾಕಲಾದ ನಾಟಿ ಕೋಳಿಗಳ ಮಾರಾಟ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya
error: Content is protected !!