July 23, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ ವೀಲ್ ಹಬ್ ತುಂಡರಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬದಲಿ ಬಸ್ ಮೂಲಕ ಪ್ರಯಾಣಿಕರನ್ನು ಕಳುಹಿಸುವ ಕೆಲಸವಾಗಿದೆ.

“ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”:ಸರಕಾರಿ ಬಸ್ ಟಯರ್ ಕಳಚಿ ಬಿದ್ದ ಸಂದರ್ಭವನ್ನು ಸ್ಥಳೀಯರು ಸುದ್ದಿ ಉದಯ ವರದಿಗಾರದೊಂದಿಗೆ ವಿವರಿಸುತ್ತಾ, ಸರಕಾರಿ ಬಸ್ ಗಳು ದಾರಿಮಧ್ಯೆ ಕೆಟ್ಟುನಿಲ್ಲುವುದು, ಟಯರ್ ಬ್ಲಾಸ್ಟ್ ಅಥವಾ ಕಳಚಿ ಬೀಳುವುದು ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಈ ರೀತಿಯ ಅನಾಹುತಗಳು ಚಾರ್ಮಾಡಿ ಘಾಟ್ ನಂತಹ ಪ್ರದೇಶಗಳಲ್ಲಿ ನಡೆದರೆ, ಪ್ರಯಾಣಿಕರ ಹಾಗೂ ಚಾಲಕರ ಪ್ರಾಣಕ್ಕೆ ಕಂಟಕ ತರುವಂತಾಗಿದೆ. ಒಟ್ಟಾರೆಯಾಗಿ “ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”. ಸರಕಾರದ ಯೋಜನೆಗಳಿಂದಾಗಿ ರಿಪೇರಿಗೂ ಹಣ ಇಲ್ಲದಂತಾಗಿದೆ. ಬಸ್ಸ್ ಗಳನ್ನು ಸರಿಯಾಗಿ ಪರಿಶೀಲನೆ ನಡೆಸಿ ಸಂಚಾರಕ್ಕೆ ಬಿಡಬೇಕು ಎಂದು ಹೇಳಿದರು.

Related posts

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!