25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ ವೀಲ್ ಹಬ್ ತುಂಡರಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬದಲಿ ಬಸ್ ಮೂಲಕ ಪ್ರಯಾಣಿಕರನ್ನು ಕಳುಹಿಸುವ ಕೆಲಸವಾಗಿದೆ.

“ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”:ಸರಕಾರಿ ಬಸ್ ಟಯರ್ ಕಳಚಿ ಬಿದ್ದ ಸಂದರ್ಭವನ್ನು ಸ್ಥಳೀಯರು ಸುದ್ದಿ ಉದಯ ವರದಿಗಾರದೊಂದಿಗೆ ವಿವರಿಸುತ್ತಾ, ಸರಕಾರಿ ಬಸ್ ಗಳು ದಾರಿಮಧ್ಯೆ ಕೆಟ್ಟುನಿಲ್ಲುವುದು, ಟಯರ್ ಬ್ಲಾಸ್ಟ್ ಅಥವಾ ಕಳಚಿ ಬೀಳುವುದು ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಈ ರೀತಿಯ ಅನಾಹುತಗಳು ಚಾರ್ಮಾಡಿ ಘಾಟ್ ನಂತಹ ಪ್ರದೇಶಗಳಲ್ಲಿ ನಡೆದರೆ, ಪ್ರಯಾಣಿಕರ ಹಾಗೂ ಚಾಲಕರ ಪ್ರಾಣಕ್ಕೆ ಕಂಟಕ ತರುವಂತಾಗಿದೆ. ಒಟ್ಟಾರೆಯಾಗಿ “ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”. ಸರಕಾರದ ಯೋಜನೆಗಳಿಂದಾಗಿ ರಿಪೇರಿಗೂ ಹಣ ಇಲ್ಲದಂತಾಗಿದೆ. ಬಸ್ಸ್ ಗಳನ್ನು ಸರಿಯಾಗಿ ಪರಿಶೀಲನೆ ನಡೆಸಿ ಸಂಚಾರಕ್ಕೆ ಬಿಡಬೇಕು ಎಂದು ಹೇಳಿದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya
error: Content is protected !!