23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ ವೀಲ್ ಹಬ್ ತುಂಡರಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬದಲಿ ಬಸ್ ಮೂಲಕ ಪ್ರಯಾಣಿಕರನ್ನು ಕಳುಹಿಸುವ ಕೆಲಸವಾಗಿದೆ.

“ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”:ಸರಕಾರಿ ಬಸ್ ಟಯರ್ ಕಳಚಿ ಬಿದ್ದ ಸಂದರ್ಭವನ್ನು ಸ್ಥಳೀಯರು ಸುದ್ದಿ ಉದಯ ವರದಿಗಾರದೊಂದಿಗೆ ವಿವರಿಸುತ್ತಾ, ಸರಕಾರಿ ಬಸ್ ಗಳು ದಾರಿಮಧ್ಯೆ ಕೆಟ್ಟುನಿಲ್ಲುವುದು, ಟಯರ್ ಬ್ಲಾಸ್ಟ್ ಅಥವಾ ಕಳಚಿ ಬೀಳುವುದು ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಈ ರೀತಿಯ ಅನಾಹುತಗಳು ಚಾರ್ಮಾಡಿ ಘಾಟ್ ನಂತಹ ಪ್ರದೇಶಗಳಲ್ಲಿ ನಡೆದರೆ, ಪ್ರಯಾಣಿಕರ ಹಾಗೂ ಚಾಲಕರ ಪ್ರಾಣಕ್ಕೆ ಕಂಟಕ ತರುವಂತಾಗಿದೆ. ಒಟ್ಟಾರೆಯಾಗಿ “ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”. ಸರಕಾರದ ಯೋಜನೆಗಳಿಂದಾಗಿ ರಿಪೇರಿಗೂ ಹಣ ಇಲ್ಲದಂತಾಗಿದೆ. ಬಸ್ಸ್ ಗಳನ್ನು ಸರಿಯಾಗಿ ಪರಿಶೀಲನೆ ನಡೆಸಿ ಸಂಚಾರಕ್ಕೆ ಬಿಡಬೇಕು ಎಂದು ಹೇಳಿದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya
error: Content is protected !!