23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಸರ್ವೇ ನಂ.130/2ರಲ್ಲಿ 0.85 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಕಾಲೇಜಿಗೆ ಸಂಬಂಧಿಸಿದ ಕಟ್ಟಡವೊಂದರ ನಿರ್ಮಾಣಕ್ಕೆ ಸಂಬಂಧಿಸಿದ ಪರವಾನಗಿ ಪ್ರಕ್ರಿಯೆ ಪೂರ್ಣಗೊಳಿಸಿ,ಅನುಮತಿ ಪಡೆದುಕೊಂಡ ನಂತರ ಕಾಮಗಾರಿ ಮುಂದುವರಿಸುವುದಾಗಿ ಗುರುವಾಯನಕೆರೆಯ ವಿದ್ವತ್ ಕಾಲೇಜಿನ ಸ್ಥಾಪಕರಾದ ಸುಭಾಶ್ಚಂದ್ರ ಶೆಟ್ಟಿಯವರು ಕುವೆಟ್ಟು ಪಂಚಾಯತ್ ಅಧಿಕಾರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಜ.5 ಮತ್ತು 7ರಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕ‌ರ್ ಅವರು ವಿದ್ವತ್ ಕಾಲೇಜಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದ ವೇಳೆ, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿ ಅಗತ್ಯ ಅನುಮೋದನೆಗಳನ್ನು ಪಡೆದುಕೊಂಡು ಕಾಮಗಾರಿ ಮುಂದುವರೆಸಿ ಎಂದು ಕಾಲೇಜು ಆಡಳಿತ ಮಂಡಳಿಗೆ ನಿರ್ದೇಶನ ನೀಡಿದ್ದರು.

ಜ.6ರಂದು ಕುವೆಟ್ಟು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಇಮ್ತಿಯಾಸ್ ಅವರು ತಿಳುವಳಿಕೆ ಪತ್ರವೊಂದನ್ನು ಕಾಲೇಜಿಗೆ ನೀಡಿ, ಕಾಮಗಾರಿಗೆ ತಡೆ ನೀಡಿ ಎಂದು ಸೂಚಿಸಿದ್ದರು.

ಈ ತಿಳುವಳಿಕೆ ಪತ್ರಕ್ಕೆ ಜ.7ರಂದು ಪತ್ರದ ಮೂಲಕ ಪ್ರತಿಕ್ರಿಯೆ ಸಲ್ಲಿಸಿರುವ ವಿದ್ವತ್ ಕಾಲೇಜಿನ ಸ್ಥಾಪಕರಾದ ಸುಭಾಶ್ಚಂದ್ರ ಶೆಟ್ಟಿಯವರು, ತಿಳುವಳಿಕೆ ಪತ್ರ ಮುಖೇನ ನೀಡಿರುವ ಸೂಚನೆಗಳನ್ನು ಗೌರವಪೂರಕವಾಗಿ ಅಂಗೀಕರಿಸಲಾಗುವುದು. ಕಟ್ಟಡ ನಿರ್ಮಾಣದ ಪರವಾನಗಿ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಸಲ್ಲಿಸಿದ್ದು, ಅಧಿಕೃತ ಅನುಮತಿ ದೊರಕುವವರೆಗೆ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ನಿಯಮಾನುಸಾರ ಅಗತ್ಯ ಅನುಮತಿಗಳನ್ನು ಪಡೆದುಕೊಂಡು ಕಾಮಗಾರಿ ಮರು ಪ್ರಾರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.

Related posts

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya
error: Content is protected !!