September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ‘”ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ'” ಎಂಬ ವಿಚಾರದ ಕುರಿತು ಜ.9 ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾರ್ಗದರ್ಶನದಲ್ಲಿ ನಡೆಯುವ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ೯:೩೦ ರಿಂದ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ನಡೆಯಲಿದೆ.


ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಷನ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಪ್ರೊ. ಶಶಿಶೇಖರ್ ಎನ್. ಕಾಕತ್ಕರ್ ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ. ವಹಿಸಲಿದ್ದಾರೆ. ವಿವಿಧ ವಿ.ವಿ. ಗಳ ಮುಖ್ಯಸ್ಥರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ವಿದ್ವಾಂಸರಿAದ ವಿಚಾರ ಸಂಕಿರಣ ನಡೆಯಲಿದೆ.


ಇದೇ ವೇಳೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಪಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಧಾರವಾಡದ ಕಿಟೆಲ್ ಕಲಾ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕವಿತಾ ಚಂದಗುಡೆ ನಡೆಸಿಕೊಡಲಿದ್ದಾರೆ.


ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಆಡಳಿತ ಕುಲಸಚಿವ ಪ್ರೊ. ಶ್ರೀಧರ ಎನ್. ಭಟ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹರಿಹರದ ಎಸ್.ಜೆ.ವಿ.ಪಿ. ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ರಮೇಶ್ ಕೆ. ಪರ್ವತಿ, ಮೈಸೂರಿನ ಸೇಂಟ್ ಫಿಲೋಮೆನಾ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ ಉಮೇಶ್, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರೀಯ ವಿಚಾರ ಸಂಕಿರಣದ ಪ್ರಧಾನ ಸಂಯೋಜಕ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya
error: Content is protected !!