July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ಇಲ್ಲಿ ಜ. 6 ರಂದು ಸಂಸ್ಥಾಪಕರ ದಿನಾಚರಣೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ಸ್ವತಃ ರಚಿಸಿದ ಹಾಡನ್ನು ಎಲ್ಲಾ ಶಿಕ್ಷಕರು ಹಾಡುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಮಾತನಾಡಿ, ಸಂಸ್ಥಾಪಕರಾದ ಗಿರೀಶ್ ಕೆ.ಎಚ್. ಅವರು ಹಾಕಿದ ಗಟ್ಟಿಯಾದ ಬುನಾದಿ ಇಂದು ಶಾಲೆ ಇಷ್ಟು ಎತ್ತರ ಬೆಳೆದಿದೆ. ಪುತ್ರನಾಗಿ ಹೆಮ್ಮೆಯ ತಂದೆ, ಶಿಷ್ಯನಾಗಿ ಎತ್ತರ ಸ್ಥಾನದಲ್ಲಿ ಗುರು, ತಿದ್ದಿ ದಾರಿತೋರಿಸುವ ಮಾರ್ಗದರ್ಶನದಿಂದ ಎಸ್‌ಎಸ್‌ಎಲ್‌ಸಿ12 ಬಾರಿ ಹಾಗೂ ಪಿಯುಸಿಯಲ್ಲಿ ಸತತ 4 ವರ್ಷ ಶೇ. 100 ಫಲಿತಾಂಶ ಬರಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಂಸ್ಥಾಪಕ ಗಿರೀಶ್ ಕೆ.ಎಚ್. ಅವರು ಅನಿಸಿಕೆ ವ್ಯಕ್ತಪಡಿಸಿ, ಗುಡ್ಡದಂತಿದ್ದ ಈ ಪ್ರದೇಶ ಪುಟ್ಟ ಮಕ್ಕಳ ನಿರಂತರ ಪಾದಸ್ಪರ್ಶದಿಂದ ಇದು ಬೆಳಗಿದೆ. ಸಂಸ್ಥೆಯು ರಾಜ್ಯ, ರಾಷ್ಟಮಟ್ಡದ ಸಾಧನೆಗೆ ಇಲ್ಲಿ ವಿದ್ಯೆ ನೀಡಿದ ಶಿಕ್ಷಕರು ಹಾಗೂ ವಿದ್ಯೆ ಪಡೆದ ವಿದ್ಯಾರ್ಥಿಗಳೇ ಕಾರಣ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್, ಕುಂಭ ಶ್ರೀ ವೈಭವ ಸಮಿತಿಯ ಅಧ್ಯಕ್ಷ ಅಶ್ವಿತ್ ಕುಲಾಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಮನೋಜ್, ಶಾಲಾ ಶೈಕ್ಷಣಿಕ ಸಲಹೆಗಾರ ಶ್ರೀಮತಿ ಉಷಾ ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕರಾದ ಅಭಿಲಾಶ್ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಅಕ್ಷತಾ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್ ವಂದಿಸಿದರು.

Related posts

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya
error: Content is protected !!