32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ, ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ, ಅಮೃತವರ್ಷಿಣಿ ಮಹಿಳಾ ಸಂಜೀವಿನಿ ಒಕ್ಕೂಟ ನಡ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯನ್ನು ಗುರಿಪಳ್ಳ ಹಾಲು ಉತ್ಪಾದಕದ ಸಹಕಾರಿ ಸಂಘದ ಪ್ರಾಂಗಣದಲ್ಲಿ ಜ.7 ರಂದು ನಡೆಯಿತು.

ಉಜಿರೆಯ ಕೃಷಿ ಸಖಿ ಭಾಗೀರಥಿ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶ ನೈಸರ್ಗಿಕ ಕೃಷಿ ಯೋಜನೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳು ಹಾಗೂ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ಜಯಾನಂದ ಮಾತಾಡಿ ನಮ್ಮ ಕೃಷಿ ಸಖಿಯರು ಅಲ್ಲಲ್ಲಿ ಇಂತಹ ರೈತ ತರಬೇತಿ ಆಯೋಜನೆ ಮಾಡಿ ರೈತರಿಗೆ ವೈಜ್ಞಾನಿಕವಾಗಿ ಕೃಷಿ ಮಾಡುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ ನೀವೆಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ರೈತ ತರಬೇತಿ ಕೇಂದ್ರದ ADA ರಮೇಶ್ ತರಬೇತಿ ಕೇಂದ್ರದಲ್ಲಿ ನಡೆಯುವ ತರಬೇತಿಗಳಿಗೆ ರೈತರು ಭಾಗವಹಿಸುವಂತೆ ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಪ್ರಭಾಕರ ಮಯ್ಯ ಅಡಿಕೆಗೆ ಬರುವ ರೋಗಗಳು ಅದರ ಪರಿಹಾರ ರೋಗ ಬರದಂತೆ ವಹಿಸಬೇಕಾದ ಮುನ್ನೆಚ್ಚರಿಕೆಗಳು ಸಾವಯವ ಕೃಷಿ ಹಾಗೂ ಅದರಿಂದ ಆಗುವ ಪ್ರಯೋಜನ ಗಳ ಬಗ್ಗೆ ಮಾಹಿತಿ ನೀಡಿ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು. ಎರಡು ಒಕ್ಕೂಟದ ಕೃಷಿ ಸಖಿಯರಾದ ಭಾಗೀರಥಿ ಮಲ್ಲಿಕಾ ಹಾಗೂ ಪಶು ಸಖಿ ಏಕಲತಾ ಪ್ರೇಮಾ ಜೀವಾಮೃತ ಮಾಡುವ ವಿಧಾನವನ್ನು ವಿವರಿಸಿ ಪ್ರಾತ್ಯಕ್ಷಿಕೆಯ ಮೂಲಕ ಮಾಡಿ ತೋರಿಸಿದರು. ಎನ್.ಎಮ್.ಎಫ್ ಯೋಜನೆ ಫಲಾನುಭವಿಗಳಿಗೆ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗುರಿಪಳ್ಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಮಿತಾ, ಎರಡು ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya
error: Content is protected !!