22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ, ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ, ಅಮೃತವರ್ಷಿಣಿ ಮಹಿಳಾ ಸಂಜೀವಿನಿ ಒಕ್ಕೂಟ ನಡ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯನ್ನು ಗುರಿಪಳ್ಳ ಹಾಲು ಉತ್ಪಾದಕದ ಸಹಕಾರಿ ಸಂಘದ ಪ್ರಾಂಗಣದಲ್ಲಿ ಜ.7 ರಂದು ನಡೆಯಿತು.

ಉಜಿರೆಯ ಕೃಷಿ ಸಖಿ ಭಾಗೀರಥಿ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶ ನೈಸರ್ಗಿಕ ಕೃಷಿ ಯೋಜನೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳು ಹಾಗೂ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ಜಯಾನಂದ ಮಾತಾಡಿ ನಮ್ಮ ಕೃಷಿ ಸಖಿಯರು ಅಲ್ಲಲ್ಲಿ ಇಂತಹ ರೈತ ತರಬೇತಿ ಆಯೋಜನೆ ಮಾಡಿ ರೈತರಿಗೆ ವೈಜ್ಞಾನಿಕವಾಗಿ ಕೃಷಿ ಮಾಡುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ ನೀವೆಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ರೈತ ತರಬೇತಿ ಕೇಂದ್ರದ ADA ರಮೇಶ್ ತರಬೇತಿ ಕೇಂದ್ರದಲ್ಲಿ ನಡೆಯುವ ತರಬೇತಿಗಳಿಗೆ ರೈತರು ಭಾಗವಹಿಸುವಂತೆ ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಪ್ರಭಾಕರ ಮಯ್ಯ ಅಡಿಕೆಗೆ ಬರುವ ರೋಗಗಳು ಅದರ ಪರಿಹಾರ ರೋಗ ಬರದಂತೆ ವಹಿಸಬೇಕಾದ ಮುನ್ನೆಚ್ಚರಿಕೆಗಳು ಸಾವಯವ ಕೃಷಿ ಹಾಗೂ ಅದರಿಂದ ಆಗುವ ಪ್ರಯೋಜನ ಗಳ ಬಗ್ಗೆ ಮಾಹಿತಿ ನೀಡಿ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು. ಎರಡು ಒಕ್ಕೂಟದ ಕೃಷಿ ಸಖಿಯರಾದ ಭಾಗೀರಥಿ ಮಲ್ಲಿಕಾ ಹಾಗೂ ಪಶು ಸಖಿ ಏಕಲತಾ ಪ್ರೇಮಾ ಜೀವಾಮೃತ ಮಾಡುವ ವಿಧಾನವನ್ನು ವಿವರಿಸಿ ಪ್ರಾತ್ಯಕ್ಷಿಕೆಯ ಮೂಲಕ ಮಾಡಿ ತೋರಿಸಿದರು. ಎನ್.ಎಮ್.ಎಫ್ ಯೋಜನೆ ಫಲಾನುಭವಿಗಳಿಗೆ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗುರಿಪಳ್ಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಮಿತಾ, ಎರಡು ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Related posts

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಎಸ್.ಡಿ.ಎಂ. ಸಂಸ್ಥೆಗಳ ಸಾಧನೆಗಳ ಅನಾವರಣ: ‘Institutions of Legacy’ಕಾಫಿ ಟೇಬಲ್ ಪುಸ್ತಕ ಹೆಗ್ಗಡೆಯವರಿಂದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!