22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಸಿನಮಕ್ಕಿ ವಲಯದ ಪೆರ್ಲ ಕಾರ್ಯಕ್ಷೇತ್ರದಲ್ಲಿ ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಪೆರ್ಲ ರಾಜೀವ ಗಾಂಧಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕ ವಿಠಲ ಪೂಜಾರಿ ಹಿಂದಿನ ಕಾಲದಲ್ಲಿ ಯಾವ ರೀತಿ ಬಡತನ ಇತ್ತು ಸಂಸ್ಕಾರ ಸಂಪ್ರದಾಯ ಆಚಾರ ವಿಚಾರಗಳಿತ್ತು ಈಗ ಅದೆಲ್ಲವೂ ಮರೆ ಮಾಚಿದೆ. ಹಿಂದಿನ ಕಾಲದ ಸಂಸ್ಕಾರಗಳನ್ನು ಉಳಿಸಬೇಕಾದರೆ ನಮಗೆ ತಿಳಿದದ್ದನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡಬೇಕಾಗಿದೆ. ಜ್ಞಾನ ವಿಕಾಸ ಕೇಂದ್ರದ ಮೂಲಕ ಜೀವನಕ್ಕೆ ಪೂರಕವಾದ ಹಲವಾರು ಮಾಹಿತಿಗಳನ್ನು ಪಡೆದು ಕುಟುಂಬಕ್ಕೆ ಬೆಳಕಾಗಲಿ ಎಂದು ತಿಳಿಸಿದರು.

ವಾತ್ಸಲ್ಯ ಕಾರ್ಯಕ್ರಮದ ಮೂಲಕ 20000 ಕುಟುಂಬಗಳು ನೆಮ್ಮದಿಯ ಬದುಕು ಕಂಡುಕೊAಡಿದೆ. ತನ್ನ ತಂದೆ ತಾಯಿಯನ್ನೇ ಆಶ್ರಮದಲ್ಲಿ ಬಿಡುವ ಈ ಕಾಲದಲ್ಲಿ ಶ್ರೀ ಕ್ಷೇತ್ರದಿಂದ ವಾತ್ಸಲ್ಯ ಮನೆ ನಿರ್ಮಾಣ ಮಾಡಿಕೊಡುವ ಮೂಲಕ ಅವರಿಗೆ ಬದುಕನ್ನು ಕಟ್ಟಿಕೊಟ್ಟಿದೆ ಎಂದರು.


ಸಿಎ ಬ್ಯಾಂಕ್ ಮಾಜಿ ಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್ ಪೂಜ್ಯರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಮ್ಮೆಲ್ಲರನ್ನು ಅಭಿವೃದ್ಧಿ ಪಡಿಸಿ ಇವತ್ತು ಉತ್ತಮ ರೀತಿಯಲ್ಲಿ ಬದುಕು ಕಂಡುಕೊAಡಿದ್ದೇವೆ. ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಇನ್ನಷ್ಟು ಮಾಹಿತಿಯನ್ನು ನಮಗೆ ತಿಳಿದಿದ್ದನ್ನು ಕನಿಷ್ಠ ನಮ್ಮ ಮನೆಯವರಿಗೆ ತಿಳಿಸಿದಾಗ ಎಲ್ಲರೂ ಪ್ರಬುದ್ಧತೆ ಹೊಂದಲು ಸಾಧ್ಯ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಒಕ್ಕೂಟ ಮಾಜಿ ಅಧ್ಯಕ್ಷೆ ವನಿತಾ ಒಕ್ಕೂಟದಲ್ಲಿ ಹೊಸ ಜ್ಞಾನ ವಿಕಾಸ ಕೇಂದ್ರಕ್ಕೆ ಅವಕಾಶ ದೊರೆತಿದ್ದು ಉತ್ತಮ ರೀತಿಯಲ್ಲಿ ಮುಂದುವರಿಸುವAತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾ, ಒಕ್ಕೂಟ ಅಧ್ಯಕ್ಷ ಅನ್ನು ಗೌಡ, ಭಜನಾ ಮಂಡಳಿಯ ಅಧ್ಯಕ್ಷ ವಿನಯ ಚಂದ್ರ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿ, ಸೇವಾಪ್ರತಿನಿಧಿ ಅರುಣಾ ಸ್ವಾಗತಿಸಿ ಮೇಲ್ವಿಚಾರಕಿ ಶಶಿಕಲಾ ಧನ್ಯವಾದವಿತ್ತರು.

Related posts

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!