September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

ಉಜಿರೆ: ‘ಭಾರತ್‌ಗ್ಯಾನ್’ ಮೂಲಕ ಭಾರತೀಯ ನಾಗರೀಕತೆಯ ಜ್ಞಾನದ ವ್ಯಾಪಕ ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಸರುವಾಸಿಯಾದ, ಲೇಖಕ, ಉಪನ್ಯಾಸಕ, ಚಲನಚಿತ್ರ ನಿರ್ಮಾಪಕ, ಭಾರತದ ಸಂಪ್ರದಾಯ, ಸಂಸ್ಕೃತಿ, ಜಾಗತಿಕ ಕೊಡುಗೆಗಳ ಅಪಾರ ಜ್ಞಾನ ಹೊಂದಿರುವ ಡಾ. ಡಿ.ಕೆ ಹರಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದರು.

ಭೇಟಿ ಬಳಿಕ ವಿವಿಧ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಗ್ಗಡೆಯವರು ಸಮಾಜದ ಬಗ್ಗೆ ಅತ್ಯಂತ ಕಾಳಜಿ ಹೊಂದಿರುವ ಕಾರಣವೇ ಗ್ರಾಮೀಣ ಭಾಗದಲ್ಲಿ ಇಂತಹ ಆಸ್ಪತ್ರೆಯ ಮೂಲಕ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡಲಾಗುತ್ತಿದೆ ಎಂದರು. ಹೈಟೆಕ್ ಸೌಲಭ್ಯವಿರುವ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಸೇವೆ, ಆಸ್ಪತ್ರೆಯ ಶುಚಿತ್ವ, ಇಲ್ಲಿರುವ ಮೂಲಭೂತ ಸೌಲಭ್ಯಗಳು ಮತ್ತು ಲಭ್ಯವಿರುವ ವೈದ್ಯಕೀಯ ಸೇವೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಡಾ. ಡಿ.ಕೆ ಹರಿ ದಂಪತಿಗಳನ್ನು ಸ್ವಾಗತಿಸಿ ಬರಮಾಡಿಕೊಂಡರು. ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಕೃಷಿಕ ಯುವಕ ಮಂಡಲದಿಂದ ಅಭಿನಂದನೆ

Suddi Udaya
error: Content is protected !!