July 23, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

ಉಜಿರೆ : ಹರಿಯಾಣ ರಾಜ್ಯದ ರಾಣಿ ಪತ್ನಲ್ಲಿ ನಡೆಯಲಿರುವ ಎಸ್‌ಜಿಎಫ್‌ಐ (SGFI) ವಯೋಮಿತಿ – 19 ಬಾಲಕರ ವಿಭಾಗದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ತಂಡವು ಆಯ್ಕೆಯಾಗಿದ್ದು, ಪಾಲ್ಗೊಳ್ಳಲಿರುವ ಕರ್ನಾಟಕ ರಾಜ್ಯ ಕಬಡ್ಡಿ ಕ್ರೀಡಾ ಪಟುಗಳ ತಂಡ ಈಗಾಗಲೇ ಸಜ್ಜಾಗಿದೆ.

ಈ ಬಾರಿ ಕರ್ನಾಟಕ ತಂಡವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರತಿನಿಧಿಸಲಿದ್ದು, ಈಗಾಗಲೇ ತಂಡಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಭಾವಂತ ಕ್ರೀಡಾ ಪಟುಗಳನ್ನು ಆಯ್ಕೆಮಾಡಿಕೊಳ್ಳಲಾಗಿದೆ. ಒಟ್ಟು 12 ವಿದ್ಯಾರ್ಥಿಗಳನ್ನು ಒಳಗೊಂಡಿರುವ ರಾಜ್ಯ ತಂಡವು, ಈವರೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ 10ದಿನಗಳ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿತ್ತು.

ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡವು ಇತ್ತೀಚೆಗೆ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದಲ್ಲಿ ಚಾಂಪಿಯನ್ ಗಳಾಗಿ ಹೊರಹೊಮ್ಮಿ, ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದುಕೊಂಡಿತ್ತು. ಇದೇ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ತಂಡಕ್ಕೆ ಮೆಚ್ಚುಗೆಯನ್ನು ‌ವ್ಯಕ್ತಪಡಿಸಿ, ಶುಭ ಹಾರೈಸಿದ್ದರು.

ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಲಿರುವ ತಂಡಕ್ಕೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ. ಪೂಂಜ ಶುಭ ಹಾರೈಸಿದ್ದಾರೆ.

ವಿವಿಧ ಜಿಲ್ಲೆಗಳ ಕ್ರೀಡಾ ಪಟುಗಳು ರಾಜ್ಯ ತಂಡಕ್ಕೆ ಆಯ್ಕೆ :

ರಾಜ್ಯದಿಂದ ತೆರಳುತ್ತಿರುವ ಕಬಡ್ಡಿ ತಂಡದಲ್ಲಿ ಧಾರವಾಡ, ಚಿಕ್ಕೋಡಿ, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿಭಾನ್ವಿತ ಕ್ರೀಡಾ ಪಟುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ತಂಡದ ನಾಯಕತ್ವವನ್ನು ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸತ್ಯ ನಾಯಕ್ ವಹಿಸಿಕೊಂಡಿದ್ದು, ವಿದ್ಯಾರ್ಥಿಗಳಾದ ಆಶಿಶ್, ಆಶಿಕ್, ಕಾರ್ತಿಕ್, ಆನಂದ್, ವಿಪುಲ್ ಶೆಟ್ಟಿ, ಸಂದೀಪ್, ವಿವೇಕಾನಂದ, ಅನಿಲ್, ಸಹೀಮ್, ಪ್ರಶಾಂತ್, ಮಾತು ಮತ್ತು ಆದರ್ಶ್ ತಂಡದಲ್ಲಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ತಂಡಕ್ಕೆ ಹಿರಿಯ ಕಬಡ್ಡಿ ತರಬೇತುದಾರ ಕೃಷ್ಣಾನಂದರಾವ್ ತರಬೇತಿಯನ್ನು ನೀಡಿರುತ್ತಾರೆ. ತಂಡದ ವ್ಯವಸ್ಥಾಪಕರಾಗಿ ವಿಜಯಪುರದ ರಮೇಶ್ ಆಯ್ಕೆಗೊಂಡಿರುತ್ತಾರೆ.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya
error: Content is protected !!