ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ ವೀಲ್ ಹಬ್ ತುಂಡರಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬದಲಿ ಬಸ್ ಮೂಲಕ ಪ್ರಯಾಣಿಕರನ್ನು ಕಳುಹಿಸುವ ಕೆಲಸವಾಗಿದೆ.

“ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”:ಸರಕಾರಿ ಬಸ್ ಟಯರ್ ಕಳಚಿ ಬಿದ್ದ ಸಂದರ್ಭವನ್ನು ಸ್ಥಳೀಯರು ಸುದ್ದಿ ಉದಯ ವರದಿಗಾರದೊಂದಿಗೆ ವಿವರಿಸುತ್ತಾ, ಸರಕಾರಿ ಬಸ್ ಗಳು ದಾರಿಮಧ್ಯೆ ಕೆಟ್ಟುನಿಲ್ಲುವುದು, ಟಯರ್ ಬ್ಲಾಸ್ಟ್ ಅಥವಾ ಕಳಚಿ ಬೀಳುವುದು ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಈ ರೀತಿಯ ಅನಾಹುತಗಳು ಚಾರ್ಮಾಡಿ ಘಾಟ್ ನಂತಹ ಪ್ರದೇಶಗಳಲ್ಲಿ ನಡೆದರೆ, ಪ್ರಯಾಣಿಕರ ಹಾಗೂ ಚಾಲಕರ ಪ್ರಾಣಕ್ಕೆ ಕಂಟಕ ತರುವಂತಾಗಿದೆ. ಒಟ್ಟಾರೆಯಾಗಿ “ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”. ಸರಕಾರದ ಯೋಜನೆಗಳಿಂದಾಗಿ ರಿಪೇರಿಗೂ ಹಣ ಇಲ್ಲದಂತಾಗಿದೆ. ಬಸ್ಸ್ ಗಳನ್ನು ಸರಿಯಾಗಿ ಪರಿಶೀಲನೆ ನಡೆಸಿ ಸಂಚಾರಕ್ಕೆ ಬಿಡಬೇಕು ಎಂದು ಹೇಳಿದರು.

Related posts

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!