23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ‘”ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ'” ಎಂಬ ವಿಚಾರದ ಕುರಿತು ಜ.9 ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾರ್ಗದರ್ಶನದಲ್ಲಿ ನಡೆಯುವ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ೯:೩೦ ರಿಂದ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ನಡೆಯಲಿದೆ.


ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಷನ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಪ್ರೊ. ಶಶಿಶೇಖರ್ ಎನ್. ಕಾಕತ್ಕರ್ ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ. ವಹಿಸಲಿದ್ದಾರೆ. ವಿವಿಧ ವಿ.ವಿ. ಗಳ ಮುಖ್ಯಸ್ಥರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ವಿದ್ವಾಂಸರಿAದ ವಿಚಾರ ಸಂಕಿರಣ ನಡೆಯಲಿದೆ.


ಇದೇ ವೇಳೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಪಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಧಾರವಾಡದ ಕಿಟೆಲ್ ಕಲಾ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕವಿತಾ ಚಂದಗುಡೆ ನಡೆಸಿಕೊಡಲಿದ್ದಾರೆ.


ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಆಡಳಿತ ಕುಲಸಚಿವ ಪ್ರೊ. ಶ್ರೀಧರ ಎನ್. ಭಟ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹರಿಹರದ ಎಸ್.ಜೆ.ವಿ.ಪಿ. ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ರಮೇಶ್ ಕೆ. ಪರ್ವತಿ, ಮೈಸೂರಿನ ಸೇಂಟ್ ಫಿಲೋಮೆನಾ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ ಉಮೇಶ್, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರೀಯ ವಿಚಾರ ಸಂಕಿರಣದ ಪ್ರಧಾನ ಸಂಯೋಜಕ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!