ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯನ್ನು ಜ. 3ರಂದು ವಿಜೃಂಭಣೆಯಿಂದ ಆಚರಿಸಲಾಯಿತು.
ಮಕ್ಕಳ ವಿವಿಧ ವೇಷಭೂಷಣಗಳು, ಹುಲಿ ಕುಣಿತದೊಂದಿಗೆ ಮೆರವಣಿಗೆ , ಬಳಿಕ ಪೂಜ್ಯ ಖಾವಂದರರ ಮೆನೇಜರ್ ರಾಜೇಂದ್ರ ದಾಸ್ ಇವರು ಧ್ವಜಾರೋಹಣ ಮಾಡುವ ಮೂಲಕ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು.
ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದಿದ್ದು ಕಾರ್ಯಕ್ರಮವನ್ನು ಶಾಲೆಯ ಸಂಚಾಲಕರಾದ ಅನಂತ ಪದ್ಮನಾಭ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್. ಡಿ ಯಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಿ ಹರ್ಷೇಂದ್ರ ಕುಮಾರ್ ಅವರು ಶಾಲೆಯ ವಾರ್ಷಿಕ ಸಂಚಿಕೆ ಭಾರತಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಪೂರ್ಣಿಮಾ ಕೆ. ಎಂ ಹಾಗೂ ಶ್ರೀಜಾ.ಎ ನಿರ್ವಹಿಸಿದರು.











