July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ಇಲ್ಲಿ ಜ. 6 ರಂದು ಸಂಸ್ಥಾಪಕರ ದಿನಾಚರಣೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ಸ್ವತಃ ರಚಿಸಿದ ಹಾಡನ್ನು ಎಲ್ಲಾ ಶಿಕ್ಷಕರು ಹಾಡುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಮಾತನಾಡಿ, ಸಂಸ್ಥಾಪಕರಾದ ಗಿರೀಶ್ ಕೆ.ಎಚ್. ಅವರು ಹಾಕಿದ ಗಟ್ಟಿಯಾದ ಬುನಾದಿ ಇಂದು ಶಾಲೆ ಇಷ್ಟು ಎತ್ತರ ಬೆಳೆದಿದೆ. ಪುತ್ರನಾಗಿ ಹೆಮ್ಮೆಯ ತಂದೆ, ಶಿಷ್ಯನಾಗಿ ಎತ್ತರ ಸ್ಥಾನದಲ್ಲಿ ಗುರು, ತಿದ್ದಿ ದಾರಿತೋರಿಸುವ ಮಾರ್ಗದರ್ಶನದಿಂದ ಎಸ್‌ಎಸ್‌ಎಲ್‌ಸಿ12 ಬಾರಿ ಹಾಗೂ ಪಿಯುಸಿಯಲ್ಲಿ ಸತತ 4 ವರ್ಷ ಶೇ. 100 ಫಲಿತಾಂಶ ಬರಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಂಸ್ಥಾಪಕ ಗಿರೀಶ್ ಕೆ.ಎಚ್. ಅವರು ಅನಿಸಿಕೆ ವ್ಯಕ್ತಪಡಿಸಿ, ಗುಡ್ಡದಂತಿದ್ದ ಈ ಪ್ರದೇಶ ಪುಟ್ಟ ಮಕ್ಕಳ ನಿರಂತರ ಪಾದಸ್ಪರ್ಶದಿಂದ ಇದು ಬೆಳಗಿದೆ. ಸಂಸ್ಥೆಯು ರಾಜ್ಯ, ರಾಷ್ಟಮಟ್ಡದ ಸಾಧನೆಗೆ ಇಲ್ಲಿ ವಿದ್ಯೆ ನೀಡಿದ ಶಿಕ್ಷಕರು ಹಾಗೂ ವಿದ್ಯೆ ಪಡೆದ ವಿದ್ಯಾರ್ಥಿಗಳೇ ಕಾರಣ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್, ಕುಂಭ ಶ್ರೀ ವೈಭವ ಸಮಿತಿಯ ಅಧ್ಯಕ್ಷ ಅಶ್ವಿತ್ ಕುಲಾಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಮನೋಜ್, ಶಾಲಾ ಶೈಕ್ಷಣಿಕ ಸಲಹೆಗಾರ ಶ್ರೀಮತಿ ಉಷಾ ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕರಾದ ಅಭಿಲಾಶ್ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಅಕ್ಷತಾ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್ ವಂದಿಸಿದರು.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!