22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

ಉಜಿರೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನಿಡಿಗಲ್-ಕಲ್ಮಂಜ ಇದರ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಲ್ಮಂಜ ಇವರ ಸಹಕಾರದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಜ.6ರಂದು ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಜರುಗಿತು.

ಬೆಳಿಗ್ಗೆ ಗಣಹೋಮ, ಸತ್ಯದೇವತೆಗೆ ತಂಬಿಲಸೇವೆ, ಭಜನಾ ಸೇವೆ, ಅಪರಾಹ್ನ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ, ರಾತ್ರಿ ಮಹಾಪೂಜೆ, ಭಜನಾ ಮಂಗಳ, ಪ್ರಸಾದ ವಿತರಣೆ ನೆರವೇರಿ ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರದ ಮಕ್ಕಳಿಂದ ಅರುಣ್ ಕುಮಾರ್ ಕಲ್ಮಂಜ ಇವರ ನಿರ್ದೇಶನದಲ್ಲಿ ಶೇಖರ್ ಟಿ., ಮಂಜುಶ್ರೀ ಸಾರಥ್ಯದಲ್ಲಿ ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ ಜರುಗಿತು.

ಈ ವೇಳೆ ಉಜಿರೆ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್ ಟಿ ಮತ್ತು ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಯಕ್ಷಗಾನ ಪ್ರೋತ್ಸಾಹಕ ಭುಜಬಲಿ ಧರ್ಮಸ್ಥಳ, ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ಹೆಗ್ಡೆ, ಕೋಶಾಧಿಕಾರಿ ಮುಕೇಶ್ ಗೌಡ, ಕಾರ್ಯದರ್ಶಿ ಹರೀಶ್ ಡಿ., ಶ್ವೇತಾ ನಾಗೇಶ್ ಆಚಾರ್ಯ, ಕಿರಣ್, ಕೃಷ್ಣಪ್ಪ ಟೈಲರ್, ಪ್ರಜ್ಞಾ, ಸಹನಾ, ಶ್ವೇತಾ, ಶಶಿಧರ ಮಡಿವಾಳ, ನಾಗೇಶ್ ಆಚಾರ್ಯ, ಹರೀಶ್ ಮಡಿವಾಳ, ಶ್ರೀ ಕ್ಷೇ ಧ.ಗ್ರಾ.ಯೋ, ಕಲ್ಮಂಜ ವಿಭಾಗದ ಸೇವಾಪ್ರತಿನಿಧಿ ದಿಶಾ, ಕಲ್ಮಂಜ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಬಿ.ಎನ್. ಹಮೀದ್ ಉಪಸ್ಥಿತರಿದ್ದರು.

Related posts

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!