July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ, ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ, ಅಮೃತವರ್ಷಿಣಿ ಮಹಿಳಾ ಸಂಜೀವಿನಿ ಒಕ್ಕೂಟ ನಡ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯನ್ನು ಗುರಿಪಳ್ಳ ಹಾಲು ಉತ್ಪಾದಕದ ಸಹಕಾರಿ ಸಂಘದ ಪ್ರಾಂಗಣದಲ್ಲಿ ಜ.7 ರಂದು ನಡೆಯಿತು.

ಉಜಿರೆಯ ಕೃಷಿ ಸಖಿ ಭಾಗೀರಥಿ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶ ನೈಸರ್ಗಿಕ ಕೃಷಿ ಯೋಜನೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೃಷಿ ಅಧಿಕಾರಿ ಗಣೇಶ್ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳು ಹಾಗೂ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ಜಯಾನಂದ ಮಾತಾಡಿ ನಮ್ಮ ಕೃಷಿ ಸಖಿಯರು ಅಲ್ಲಲ್ಲಿ ಇಂತಹ ರೈತ ತರಬೇತಿ ಆಯೋಜನೆ ಮಾಡಿ ರೈತರಿಗೆ ವೈಜ್ಞಾನಿಕವಾಗಿ ಕೃಷಿ ಮಾಡುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ ನೀವೆಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ರೈತ ತರಬೇತಿ ಕೇಂದ್ರದ ADA ರಮೇಶ್ ತರಬೇತಿ ಕೇಂದ್ರದಲ್ಲಿ ನಡೆಯುವ ತರಬೇತಿಗಳಿಗೆ ರೈತರು ಭಾಗವಹಿಸುವಂತೆ ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಪ್ರಭಾಕರ ಮಯ್ಯ ಅಡಿಕೆಗೆ ಬರುವ ರೋಗಗಳು ಅದರ ಪರಿಹಾರ ರೋಗ ಬರದಂತೆ ವಹಿಸಬೇಕಾದ ಮುನ್ನೆಚ್ಚರಿಕೆಗಳು ಸಾವಯವ ಕೃಷಿ ಹಾಗೂ ಅದರಿಂದ ಆಗುವ ಪ್ರಯೋಜನ ಗಳ ಬಗ್ಗೆ ಮಾಹಿತಿ ನೀಡಿ ರೈತರ ಪ್ರಶ್ನೆಗಳಿಗೆ ಉತ್ತರಿಸಿದರು. ಎರಡು ಒಕ್ಕೂಟದ ಕೃಷಿ ಸಖಿಯರಾದ ಭಾಗೀರಥಿ ಮಲ್ಲಿಕಾ ಹಾಗೂ ಪಶು ಸಖಿ ಏಕಲತಾ ಪ್ರೇಮಾ ಜೀವಾಮೃತ ಮಾಡುವ ವಿಧಾನವನ್ನು ವಿವರಿಸಿ ಪ್ರಾತ್ಯಕ್ಷಿಕೆಯ ಮೂಲಕ ಮಾಡಿ ತೋರಿಸಿದರು. ಎನ್.ಎಮ್.ಎಫ್ ಯೋಜನೆ ಫಲಾನುಭವಿಗಳಿಗೆ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗುರಿಪಳ್ಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಮಿತಾ, ಎರಡು ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Related posts

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya
error: Content is protected !!