25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು.

ಇತ್ತೀಚೆಗೆ ನಡೆದ ಕೋಟೆ ತರವಾಡಿನ ಧರ್ಮ ನೇಮೋತ್ಸವದಲ್ಲಿ ಡಾ. ರವೀಶ್ ಪಡುಮಲೆ ಅವರು ದೈವ ನರ್ತನ ಮಾಡಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಟುಂಬದವರು ಬಂಗಾರದ ಉಂಗುರ ತೊಡಿಸುವ ಮೂಲಕ ಗೌರವಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೋಟೆ ಗಣೇಶ್ ರೈ ನಾಡಜೆ, ಜಯರಾಮ ರೈ ಮೂಡಂಬೈಲು, ಬಾಲಕೃಷ್ಣ ರೈ ಸುಬ್ರಹ್ಮಣ್ಯ, ನಾರಾಯಣ ರೈ ಮೂಡಂಬೈಲ್, ಪುಷ್ಪರಾಜ್ ಶೆಟ್ಟಿ ಕೋಟೆ, ಸುಬ್ಬಯ್ಯ ರೈ ಕಡಾರ್, ರಮೇಶ್ ರೈ ನೆಟ್ಟಣಿಗೆ, ಲೋಹಿತ್ ಶೆಟ್ಟಿ ಡೆಪ್ಪಾಜೆ, ಪ್ರದೀಪ್ ರೈ ಕಡಬ, ಪ್ರಮೋದ್ ರೈ ಕಡಬ, ಸುಕೇಶ್ ರೈ ಮೊಡಪ್ಪಾಡಿ ಹಾಗೂ ಕೋಟೆ ಬಾರಿಕೆ ಮೂಲಕೋಟೆ ತರವಾಡು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!