September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

ಬೆಳ್ತಂಗಡಿ: ತುಳುನಾಡಿನ ಪ್ರಸಿದ್ಧ ದೈವ ನರ್ತಕ ಹಾಗೂ ಧರ್ಮಸ್ಥಳ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ಅವರಿಗೆ ಮೂಲ ಕೋಟೆ ತರವಾಡಿನ ಕುಟುಂಬಸ್ಥರು ಗೌರವ ಸನ್ಮಾನ ನೆರವೇರಿಸಿದರು.

ಇತ್ತೀಚೆಗೆ ನಡೆದ ಕೋಟೆ ತರವಾಡಿನ ಧರ್ಮ ನೇಮೋತ್ಸವದಲ್ಲಿ ಡಾ. ರವೀಶ್ ಪಡುಮಲೆ ಅವರು ದೈವ ನರ್ತನ ಮಾಡಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕುಟುಂಬದವರು ಬಂಗಾರದ ಉಂಗುರ ತೊಡಿಸುವ ಮೂಲಕ ಗೌರವಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೋಟೆ ಗಣೇಶ್ ರೈ ನಾಡಜೆ, ಜಯರಾಮ ರೈ ಮೂಡಂಬೈಲು, ಬಾಲಕೃಷ್ಣ ರೈ ಸುಬ್ರಹ್ಮಣ್ಯ, ನಾರಾಯಣ ರೈ ಮೂಡಂಬೈಲ್, ಪುಷ್ಪರಾಜ್ ಶೆಟ್ಟಿ ಕೋಟೆ, ಸುಬ್ಬಯ್ಯ ರೈ ಕಡಾರ್, ರಮೇಶ್ ರೈ ನೆಟ್ಟಣಿಗೆ, ಲೋಹಿತ್ ಶೆಟ್ಟಿ ಡೆಪ್ಪಾಜೆ, ಪ್ರದೀಪ್ ರೈ ಕಡಬ, ಪ್ರಮೋದ್ ರೈ ಕಡಬ, ಸುಕೇಶ್ ರೈ ಮೊಡಪ್ಪಾಡಿ ಹಾಗೂ ಕೋಟೆ ಬಾರಿಕೆ ಮೂಲಕೋಟೆ ತರವಾಡು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!