September 6, 2026
ಆರೋಗ್ಯ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್‌ನಿAದ ೧ ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕರ್ತವ್ಯನಿರತ ಮೆಸ್ಕಾಂ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಿಸಲಾಯಿತು.

ಕೆಲ ತಿಂಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಡಿಲ್ನಾಳ ಎಂಬಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮೃತಪಪಟ್ಟ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ತನ್ಮ ವೈಯಕ್ತಿಕ ಅಪಘಾತ ವಿಮಾ ಯೋಜನೆಯಡಿ ೧ ಕೋಟಿ ರೂ. ಮೊತ್ತ ಚೆಕ್‌ನ್ನು ಮಂಗಳೂರು ವೃತ್ತದ ಜನರಲ್ ಮ್ಯಾನೇಜರ್ ಮಂಜುನಾಥ್ ಸಿಂಗ್ನ ನೀಡಿದರು. ವಿಜೇಶ್ ಗುರುವಾಯನಕೆರೆ ಕೆನಾರ ಬ್ಯಾಂಕ್ ಶಾಖೆಯಲ್ಲಿ ಸ್ಯಾಲರಿ ಖಾತೆ ಹೊಂದಿದ್ದರು. ಕೆನಾರ ಬ್ಯಾಂಕ್‌ನಲ್ಲಿ ಸ್ಯಾಲರಿ ಖಾತೆದಾರರಿಗೆ ಒಂದು ಕೋಟಿ ರೂ. ಅಪಘಾತ ವಿಮೆ ಇದ್ದಿದ್ದರಿಂದ ವಿಜೇಶ್ ÀÄಟುಂಬಕ್ಕೆ ಚೆಕ್ ಹಸ್ತಂತಾರಿಸಲಾಯಿತು. ಮಂಗಳೂರು ವಿದ್ಯುತ್ ಸರಬರಾಜು ನಿಗಮ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!