23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಲಯನ್ಸ್ ಜಿಲ್ಲೆ 317D ಪ್ರಾಂತ್ಯ–10 ರ ಸದಸ್ಯರ ಸಮಾವೇಶವಾದ “ಸ್ಪಂದನಾ ಪ್ರಾಂತೀಯ ಸಮ್ಮೇಳನ–2026” ಫೆಬ್ರವರಿ 7ರಂದು (ಶನಿವಾರ) ಬೆಳುವಾಯಿ ಖಂಡಿಗ ಗ್ರೀನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಮ ಶೆಟ್ಟಿ ಹಾಗೂ ಪ್ರಧಾನ ಅರ್ಚಕ ವಿಷ್ಣುಮೂರ್ತಿ ಭಟ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪ್ರಾಂತೀಯ ಅಧ್ಯಕ್ಷ ಲಯನ್ ಜಗದೀಶ್ಚಂದ್ರ ಡಿ.ಕೆ., ಪ್ರಾಂತೀಯ ಸಮ್ಮೇಳನ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಇಂದ್ರ, ಪ್ರಧಾನ ಕಾರ್ಯದರ್ಶಿ ಲಯನ್ ಹೆರಾಲ್ಡ್ ತವರೊ, ಕೋಶಾಧಿಕಾರಿ ಹರೀಶ್ ಕುಮಾರ್, ವಲಯ ಅಧ್ಯಕ್ಷ ಜೊಸ್ಸಿ ಮೆನೆಜಸ್, ಲಯನ್ಸ್ ಕ್ಲಬ್ ವೇಣೂರು ಅಧ್ಯಕ್ಷ ಸುಧೀರ್ ಭಂಡಾರಿ, ಕಾರ್ಯದರ್ಶಿ ಜಯರಾಮ ಹೆಗ್ಡೆ, ಕೋಶಾಧಿಕಾರಿ ಸತೀಶ್ ಚಿಗುರು ಲಯನ್ಸ್ ಕ್ಲಬ್ ಬೆಳ್ತಂಗಡಿ ಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ಲಯನ್ಸ್ ಕ್ಲಬ್ ಮೂಡಬಿದ್ರೆ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ವಿನೋದ್ ಡೇಸ ವೇಣೂರಿನ ಮಾಜಿ ಅಧ್ಯಕ್ಷರುಗಳಾದ ಭಾಸ್ಕರ ಪೈ ಭರತ್ ರಾಜ್ ಮುದ್ಯ ದಯಾನಂದ ಭಂಡಾರಿ ಗಿರೀಶ್ ಕೆ ಯಸ್ ನಿತೀಶ್ ಕುಕ್ಕೇಡಿ ನವೀನ್ ಪಚ್ಚೇರಿ ನಿರಂಜನ್ ಕೆ ಯಸ್ , ಹಿರಿಯ ಸದಸ್ಯರಾದ ಸತ್ಯನಾರಾಯಣ ಪೈ ಲುಕಾಸ್ ಕೊರೆಯ ಸೇರಿದಂತೆ ಲಯನ್ಸ್ ಕ್ಲಬ್ ಸದಸ್ಯರು ಸದಸ್ಯರು ಉಪಸ್ಥಿತರಿದ್ದರು.

ಸಮ್ಮೇಳನವು ಸದಸ್ಯರ ನಡುವೆ ಸಹಕಾರ, ಸೇವಾ ಚಟುವಟಿಕೆಗಳ ವಿಸ್ತರಣೆ ಹಾಗೂ ಸಂಘಟನಾ ಬಲವರ್ಧನೆಗೆ ವೇದಿಕೆಯಾಗಲಿದೆ ಎಂದು ನಾಯಕರು ಅಭಿಪ್ರಾಯಪಟ್ಟರು.

Related posts

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya
error: Content is protected !!