July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

ಅರಸಿನಮಕ್ಕಿ: ಮೂಲ್ಯರ ಯಾನೆ ಕುಲಾಲರ ಕೂಟದ ೩೧ನೇ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ಜ.11ರಂದು ಅರಸಿನಮಕ್ಕಿ ಕುಂಭಶ್ರೀ ಚಾವಡಿಯಲ್ಲಿ ನಡೆಯಲಿರುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷ ಕೆ. ಗಂಗಾಧರ ಕುಲಾಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಡೆಪ್ಯುಟಿ ಕಮಾಂಡೆಂಟ್ ಚಂದಪ್ಪ ಮೂಲ್ಯ ಡಿ., ಸಾಹಿತಿ, ಯಕ್ಷಗಾನ ಕಲಾವಿದ ಮಹೇಶ್ ಕುಲಾಲ್ ಅರ್ತಿಮೂಲೆ, ತಾಲೂಕು ತುಳುನಾಡ ಒಕ್ಕೂಟದ ಅಧ್ಯಕ್ಷ ರಾಜೇಶ್ ಕುಲಾಲ್ ಬೈರೊಟ್ಟು, ಅರಸಿನಮಕ್ಕಿ ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಮಂಜುಳಾ, ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ವಿಭಾಗೀಯ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ಕಾಯರ್ತಡ್ಕ ಕುಂಭಶ್ರೀ ಗೆಳೆಯರ ಬಳಗದ ಗೌರವಾಧ್ಯಕ್ಷ ವಿಜಯ್ ಕೆ., ಮಂಗಳೂರು ಪೊಲೀಸ್ ಇಲಾಖೆಯ ರಾಧಾಕೃಷ್ಣ ಕುಲಾಲ್ ಪಾಣಾಜೆ, ಚಾರ್ಮಾಡಿ ಪಂಚಶ್ರೀ ಕಲಾಕೂಟದ ಅಧ್ಯಕ್ಷ, ರಂಗ ಕಲಾವಿದ ಶ್ರೀನಿವಾಸ ಕುಲಾಲ್ ಕಕ್ಕಿಂಜೆ ಭಾಗವಹಿಸಲಿದ್ದಾರೆ.

ಕೊಕ್ಕಡ ಪಂಚಮಿ ಹಿತಾಯುರ್ಧಾಮದ ಹಿರಿಯ ವೈದ್ಯ ಡಾ| ಮೋಹನದಾಸ ಗೌಡ ಕೊಕ್ಕಡ ಇವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಮಧ್ಯಾಹ್ನ ಹವ್ಯಾಸಿ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!