ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಕಾರ್ಯಕ್ರಮ: ಜ.14ರಂದು ಬೆಳಿಗ್ಗೆ ತೋರಣ ಮುಹೂರ್ತ, ಸಂಜೆ ಧ್ವಜಾರೋಹಣ ಸುತ್ತು ಬಲಿ, ಮಹಾಪೂಜೆ, ಜ.15 ರಂದು ಮಹಾಪೂಜೆ, ಸುತ್ತು ಬಲಿ, ಪೆರ್ಲೆಕಟ್ಟಿ ಪೂಜೆ, ನೃತ್ಯೋತ್ಸವ, ಮಂಗಳಾರತಿ, ಜ.16ರಂದು ಮಹಾಪೂಜೆ, ಸುತ್ತು ಬಲಿ, ಉಳಿಯಬೀಡಿನ ಕಟ್ಟೆ ಪೂಜೆ, ನೃತ್ಯೋತ್ಸವ, ಮಂಗಳಾರತಿ, ಜ.17ರಂದು ಬೆಳಿಗ್ಗೆ ಉಳಿಯಬೀಡಿನಿಂದ ಉಳ್ಳಾಲ್ತಿ ನಾಡದೈವಗಳ ಭಂಡಾರ ಬರುವುದು. ಬೆಳಿಗ್ಗೆ ಮಹಾಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಸುತ್ತುಬಲಿ, ಕೆಮನೋಡಿ ಕೆಟ್ಟಿ ಪೂಜೆ, ನೃತ್ಯೋತ್ಸವ, ಕವಾಟ ಬಂಧನ, ದೇವರ ಶಯನ, ಜ.18ರಂದು ಬೆಳಿಗ್ಗೆ ಗಣಹೋಮ, ಶುಭ ಮುಹೂರ್ತದಲ್ಲಿ ಕವಟೋದ್ಘಾಟನೆ, ತೈಲಾಭಿಷೇಕ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ದೇವರ ಅವಕೃತ, ಬಟ್ಟಲು ಕಾಣಿಕೆ, ಧ್ವಜಾವರೋಹಣ, ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಉಳ್ಳಾಳ್ತಿ ನಾಡದೈವಗಳ ನೇಮೋತ್ಸವ, ನಡೆಯಲಿದೆ.

ಜ.14 ರಂದು ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್, ಉಳಿಯಬೀಡು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಭಾಗವಹಿಸಲಿದ್ದಾರೆ. ರಾತ್ರಿ ಪಟ್ರಮೆ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮತ್ತು ಸುರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜ.15ರಂದು ಊರ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಜ.16ರಂದು ರಾತ್ರಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಗದಾಯುದ್ಧ” ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!