September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.೧೪ ರಿಂದ ೨೦ರವರೆಗೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ನೇತೃತ್ವದಲ್ಲಿ ನಡೆಯಲಿದೆ.

ಜ.14: ತೋರಣ-ಉಗ್ರಾಣ ಮುಹೂರ್ತ, ಪುಣ್ಯಾಹ ವಾಚನ, ನವಕಲಶ, ಧ್ವಜಾರೋಹಣ, ಮಹಾಪೂಜೆ ದೇವರ ಬಲಿ, ವಸಂತ ಕಟ್ಟೆ ಪೂಜೆ, ಮಹಾಪೂಜೆ, ನಿತ್ಯ ಬಲಿ, ಅನ್ನಸಂತರ್ಪಣೆ, ಜ.15 ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಧ್ವಜಪೂಜೆ, ಕುಣಿತ ಭಜನೆಯೊಂದಿಗೆ ದೇವರ ಮೂಡು ಸವಾರಿ, ಮಹಾಪೂಜೆ ನಿತ್ಯ ಬಲಿ, ದೇವರ ಬಲಿ, ಜ.೧೬: ಅಭಿಷೇಕ, ಮಹಾಪೂಜೆ, ಧ್ವಜ ಪೂಜೆ, ಅನ್ನಸಂತರ್ಪಣೆ, ವಸಂತಕಟ್ಟೆ ಪೂಜೆ, ಕುಣಿತ ಭಜನೆಯೊಂದಿಗೆ ದೇವರ ಪಡುಸವಾರಿ, ಚಂದ್ರಮಂಡಲ ಉತ್ಸವ, ನಿತ್ಯ ಬಲಿ, ಜ.17: ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಧ್ವಜಪೂಜೆ, ಅನ್ನಸಂತರ್ಪಣೆ, ದೇವರ ಬಲಿ, ವಸಂತಕಟ್ಟೆ ಪೂಜೆ, ಕುಣಿತ ಭಜನೆಯೊಂದಿಗೆ ದೇವರ ಅರಮನೆ ಬೀದಿ ಸವಾರಿ, ಚಂದ್ರಮಂಡಲ ಉತ್ಸವ, ಮಹಾಪೂಜೆ, ನಿತ್ಯಬಲಿ, ಜ.18: ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಧ್ವಜಪೂಜೆ, ಅನ್ನಸಂತರ್ಪಣೆ, ದೇವರ ದರ್ಶನ ಬಲಿ, ವಸಂತಕಟ್ಟೆ ಪೂಜೆ, ಚಂದ್ರಮಂಡಲ ಉತ್ಸವ, ಮಹಾಪೂಜೆ, ನಿತ್ಯಬಲಿ, ಜ.19: ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಧ್ವಜಪೂಜೆ, ಅನ್ನಸಂತರ್ಪಣೆ, ಭಜನೆ ಮೂಜಿಲ್ನಾಯ ದೈವ ಹಾಗೂ ಪರಿವಾರ ದೈವಗಳ ನೇಮ, ಶ್ರೀ ಭೂತಬಲಿ, ಕವಾಟ ಬಂಧನ. ಜ.20: ಪ್ರಾರ್ಥನೆ, ಕವಾಟೋದ್ಘಾಟನೆ, ದಿವ್ಯದರ್ಶನ, ಕಲಾಶಾಭಿಷೇಕ, ಅಲಂಕಾರ ಪೂಜೆ, ಚಂದ್ರಮಂಡಲ ಉತ್ಸವ, ಮಹಾಪೂಜೆ, ದೇವರ ಬಲಿ, ಹಣ್ಣುಕಾಯಿ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, ಭಜನೆ, ದೇವರ ಮಹೋತ್ಸವ, ವಸಂತಕಟ್ಟೆ ಪೂಜೆ, ಮಹಾರಥೋತ್ಸವ, ಸುಡುಮದ್ದು ಪ್ರದರ್ಶನ, ಕೊಡಮಣಿತ್ತಾಯ ದೈವದ ನೇಮ, ದೈವ ದೇವರ ಭೇಟಿ, ಅವಭೃತ ಸ್ನಾನ, ಧ್ವಜ ಅವರೋಹಣ, ಜ.21: ಶುದ್ಧ ಸಂಪ್ರೋಕ್ಷಣೆ, ಮಹಾಪೂಜೆ, ಮಂತ್ರಾಕ್ಷತೆ ಹಾಗೂ ಜ.22ರಂದು ರಂಗಪೂಜೆ ಹಾಗೂ ಮಡಂತಿಮಾರು ದೈವಸ್ಥಾನದಲ್ಲಿ ಕೊಡಮಣಿತ್ತಾಯ ದೈವದ ನೇಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜ.14: 20 ಭಜನಾ ತಂಡಗಳಿಂದ ಭಜನಾ ಸತ್ಸಂಗ ಕಾರ್ಯಕ್ರಮ, ಜ.18: ಅಳದಂಗಡಿ ಸ.ಪ.ಪೂ.ಕಾಲೇಜು ಹಾಗೂ ಸೈಂಟ್ ಪೀಟರ್ ಕ್ಲೇವರ್ ಆಂ.ಮಾ. ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಜ.20: ಹರಿದಾಸ ಡೋಗ್ರ ಬಳಗದಿಂದ ಸ್ಯಾಕ್ಸೋಫೋನ್, ಅಳದಂಗಡಿ ಸ.ಹಿ.ಪ್ರಾ.ಶಾಲಾ ಹಾಗೂ ಸುಲ್ಕೇರಿ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಭಾ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ, ತುಳು ಸಾಮಾಜಿಕ ನಾಟಕ, ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕಂಬಳ ಓಟಗಾರ ಸತೀಶ ಸುಲ್ಕೇರಿಮೊಗ್ರು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕಾಶಿಪಟ್ಣ ಹಾಗೂ ಅರ್ಕಿಜೆದಡ್ಡ ಪೂವಪ್ಪ ಮಡಿವಾಳರಿಗೆ ಸನ್ಮಾನ ನಡೆಯಲಿದೆ.

Related posts

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya
error: Content is protected !!