ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಪಡಂಗಡಿ: ಮನೆಯಲ್ಲಿ ಯಾರು ಇಲ್ಲದ ಸಮಯ ಒಳನುಗ್ಗಿದ ಕಳ್ಳರು ಸುಮಾರು ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಜ.6ರಂದು ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ಬದ್ಯಾರು ಐಬಿ ರೆಸಿಡೆನ್ಸಿ ನಿವಾಸಿ ಇಸ್ಮಾಯಿಲ್ ಎಂಬವರು ಮನೆಯಲ್ಲಿ ಈ ಕಳ್ಳತನ ನಡೆದಿದೆ. ಜ.6ರಂದು ರಾತ್ರಿ 7 ಗಂಟೆಗೆ ಇಸ್ಮಾಯಿಲ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಮನೆಗೆ ಬೀಗ ಹಾಕಿ ಮೂಡಬಿದ್ರೆಗೆ ಕಾರ್ಯಕ್ರಮಕ್ಕೆ ಹೋದವರು ಮರಳಿ ರಾತ್ರಿ 11.50ಕ್ಕೆ ವಾಪಾಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇಸ್ಮಾಯಿಲ್ ಅವರು ಮೂಡಬಿದ್ರೆಗೆ ಹೋಗಿರುವುದನ್ನು ತಿಳಿದ ಯಾರೋ ಕಳ್ಳರು ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ಮನೆಯ ಹಿಂಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸಿ ಮನೆಯ ಬೆಡ್ ರೂಮಿನಲ್ಲಿದ್ದ ಕಪಾಟಿನ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ 24 ಗ್ರಾಂ ತೂಕದ 2 ಚಿನ್ನದ ಬಳೆ, 20ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ, ೪ಗ್ರಾಂ ತೂಕದ ಬ್ರಾಸ್‌ಲೈಟ್-1, ಮೂರು ಗ್ರಾಂ ತೂಕದ 2 ಉಂಗುರ, ಒಂದೂವರೆ ಗ್ರಾಂ 1 ಉಂಗುರ, 4 ಗ್ರಾಂ ತೂಕದ ಕಿವಿಯ ಓಲೆ ಸೇರಿದಂತೆ ಒಟ್ಟು 83.5 ಗ್ರಾಂ ತೂಕದ ಚಿನ್ನಭಾರಣ ಕಳವುಗೈದಿದ್ದು, ಇದರ ಮೌಲ್ಯ 9,50,೦೦೦ ಎಂದು ಅಂದಾಜಿಸಲಾಗಿದೆ. ಜೊತೆಗೆ ಕಪಾಟಿನಲ್ಲಿದ್ದ ರೂ.25,೦೦೦ ನಗದು ಹಣ ಕಳವು ಮಾಡಿವುದಾಗಿ ವರದಿಯಾಗಿದೆ.

Related posts

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya
error: Content is protected !!