25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ.

ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದನ್ನು ಸಾರ್ವಜನಿಕರು ಕಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ತಂಡ ರಾತ್ರಿ 9:45 ಗಂಟೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ನಡೆಸಿದೆ ಅಲ್ಲದೇ ಎರಡು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲು ತಿರ್ಮಾನಿಸಿದ್ದಾರೆ. ಚಿರತೆ ಸಂಜೆ ವೇಳೆಗೆ ಕೂಗು ಶಬ್ದವನ್ನು ಕೆಲ ಮಂದಿ ಕೇಳಿದ್ದು ಕಳೆದ ಹಲವು ದಿನಗಳಿಂದ ಚಿರತೆ ಈ ಪ್ರದೇಶದಲ್ಲಿ ಸುತ್ತಾಡುತ್ತಿದೆ ಅಲ್ಲದೇ ಒಂದೇ ನಿರ್ದಿಷ್ಟ ಸ್ಥಳದಲ್ಲಿ ಚಿರತೆ ಇರಾದ ಕಾರಣ ಬೋನ್ ಇರಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಹೈರಾಣಿಸಿದೆ. ಈ ಸಂದರ್ಭದಲ್ಲಿ ಅರಣ್ಯ ಪಾಲಕ ನಾಗಲಿಂಗಪ್ಪ ಡಿ., ವಾಹನ ಚಾಲಕ ಕಿಶೋರ್ ಕುಮಾರ್ ಹಾಗೂ ಸ್ಥಳೀಯರಾದ ವಿಜಯ್ ಪುಪಾಡಿಕಲ್ಲು, ಪುರಂದರ ಕಜೆ, ಪತ್ರಕರ್ತ ಮನೀಶ್ ವಿ.ಅಂಚನ್ ಪಾಲೇದು ಮತ್ತಿತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya
error: Content is protected !!