July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಮೂತ್ರರೋಗ ತಪಾಸಣಾ ಶಿಬಿರ ನಡೆಯಿತು.

ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ರೋಗ ತಪಾಸಣೆ ನಡೆಸಿಕೊಟ್ಟರು. ಮೂತ್ರಪಿಂಡದ ಕಲ್ಲು ತಪಾಸಣೆ, ಪ್ರೋಸ್ಟೇಟ್ ಸಂಬಂಧಿತ ಸಮಸ್ಯೆಗಳು, ಮೂತ್ರಪಿಂಡದ ವೈಫಲ್ಯ ತಪಾಸಣೆ ಮತ್ತು ಇತರ ಎಲ್ಲಾ ತರಹದ ಮೂತ್ರನಾಳ ಸಂಬAಧಿತ ಸಮಸ್ಯೆಗಳ ತಪಾಸಣೆ ನಡೆಸಲಾಯಿತು. 60ಕ್ಕೂ ಅಧಿಕ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, ಪ್ರಯೋಗಾಲಯ, ರೇಡಿಯಾಲಜಿ ಮತ್ತು ಇತರೆ ಚಿಕಿತ್ಸಾ ಕ್ರಮಗಳಿಗೆ 20% ರಿಯಾಯಿತಿ ಔಷಧ ಮತ್ತು ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ ನೀಡಲಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Related posts

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya
error: Content is protected !!