September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಇಲ್ಲಿ ಅತ್ಯಂತ ಸಡಗರದಿಂದ ನಡೆಯಿತು.

ಎಸ್ ಡಿ ಎಮ್. ಸಿ ಯ ಅಧ್ಯಕ್ಷರು ಹಾಗೂ ಕಳಿಯ ಗ್ರಾಮ ಪಂಚಾಯತ್ ಇದರ ಸದಸ್ಯ ಹರೀಶ್ ಕುಮಾರ್ ಬಿ. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನಾ ನೆರವೇರಿಸಿ ಮಕ್ಕಳಿಗೆ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಬಸವಲಿಂಗಪ್ಟ ಟಿ. ಬಿ . ಉಪಸ್ಥಿತರಿದ್ದು ಕಾರ್ಯಕ್ರಮ ವೀಕ್ಷಿಸಿ ಪ್ರಶಂಸಿದರು.


ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ಸಿಆರ್ ಪಿ. ರಾಜೇಶ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನು ಆಡಿದರು.
ಎಸ್. ಡಿ . ಎಂ . ಸಿ . ಯ ಸದಸ್ಯರುಗಳಾದ ಯೋಗೀಶ್, ರಹಿಮಾನ್ , ಶಶಿಕಲಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕ್ಲಸ್ಟರನ 13 ಶಾಲೆಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪಾಲ್ಗೊಂಡು, ಭಾಗವಹಿಸಿದ ಎಲ್ಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಪದವೀಧರ ಶಿಕ್ಷಕರಾದ ಕೃಷ್ಣ ಪ್ರಸಾದ ಸ್ವಾಗತಿಸಿ, ಮಹಾಂತೇಶ್ ಜಿ. ಕೆ. ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಸಹಕಾರ ನೀಡಿದರು. ಮುಖ್ಯೋಪಾದ್ಯಾಯರಾದ ಶ್ರೀಮತಿ ಶಾಂತಾ ಎಸ್ ಧನ್ಯವಾದವಿತ್ತರು.
.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya
error: Content is protected !!