ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಚಟುವಟಿಕೆಗಳ ಕುರಿತು ಅಧ್ಯಯನ ನಡೆಸಲು ವಿದೇಶಗಳು ಉತ್ಸಕರಾಗಿದ್ದು ಪ್ರತಿ ವರ್ಷ ಬೇರೆ ಬೇರೆ ದೇಶಗಳ ಅಧ್ಯಯನ ತಂಡಗಳು ಆಗಮಿಸುತ್ತಿರುತ್ತವೆ. ಇತ್ತೀಚೆಗೆ ಅಮೇರಿಕಾದ ಪೆನ್ಸಿಲ್ವೇನಿಯ ತಂಡ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿಶೇಷ ಅಧ್ಯಯನವನ್ನು ನಡೆಸಿತು.

ಹತ್ತು ಸದಸ್ಯರನ್ನೊಳಗೊಂಡ ತಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳನ್ನು ಭೇಟಿ ಮಾಡಿ ಶ್ರೀ ಕ್ಷೇತ್ರದ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆಯನ್ನು ನಡೆಸಿ ಮಾಹಿತಿಗಳನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಶ್ರೀ ಹೆಗ್ಗಡೆಯವರ ಸಾಧನೆಗಳನ್ನು ಗುರುತಿಸಿ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯವು ಹೆಗ್ಗಡೆಯವರಿಗೆ ‘ವಿಷನರಿ ಲೀಡರ್’ ಪ್ರಶಸ್ತಿಯನ್ನು ನೀಡಿ ಗೌರವಿಸಿತು.


ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಭೇಟಿ ನೀಡಿದ ಅಧ್ಯಯನ ತಂಡಕ್ಕೆ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್. ರವರು ಮಾಹಿತಿಯನ್ನು ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬಿ.ಸಿ. ಕಾರ್ಯಚಟುವಟಿಕೆಗಳ ಮೂಲಕ ಬ್ಯಾಂಕ್‌ಗಳಿಂದ ಅತೀ ಕಡಿಮೆ ಬಡ್ಡಿ ದರದಲ್ಲಿ ಸ್ವಸಹಾಯ ಸಂಘಗಳಿಗೆ ಸಾಲವನ್ನು ನೀಡುವ ಮೂಲಕ ಲಕ್ಷಾಂತರ ಬಡವರ ಬದುಕನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದೆ. ಗ್ರಾಮಾಭಿವೃದ್ಧಿ ಯೋಜನೆಯ ಈ ಸಾಧನೆ ವಿಶ್ವಕ್ಕೆ ಮಾದರಿಯಾಗಿದೆಯೆಂದು ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಸೀನಿಯರ್ ಪ್ರೊಫೆಸರ್ ಫೆಮಿಡ ಹ್ಯಾಂಡಿಯವರು ಅಭಿಪ್ರಾಯಪಟ್ಟರು.

ಪುರಾತನ ವಸ್ತುಗಳ ವೀಕ್ಷಣೆಗಾಗಿ ಕ್ಷೇತ್ರದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಅಧ್ಯಯನ ತಂಡಕ್ಕೆ ಶ್ರೀಮತಿ ಶ್ರದ್ಧಾ ಅಮಿತ್‌ರವರು ಮಂಜೂಷಾದ ಹುಟ್ಟು, ಉದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಅನ್ನಪೂರ್ಣ ಭೋಜನಾಲಯ, ಸಿರಿ ಸಂಸ್ಥೆಯ ಕೇಂದ್ರ ಕಚೇರಿಗೆ ತಂಡ ಭೇಟಿ ನೀಡಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya
error: Content is protected !!