25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಕಾರ್ಯಕ್ರಮ: ಜ.14ರಂದು ಬೆಳಿಗ್ಗೆ ತೋರಣ ಮುಹೂರ್ತ, ಸಂಜೆ ಧ್ವಜಾರೋಹಣ ಸುತ್ತು ಬಲಿ, ಮಹಾಪೂಜೆ, ಜ.15 ರಂದು ಮಹಾಪೂಜೆ, ಸುತ್ತು ಬಲಿ, ಪೆರ್ಲೆಕಟ್ಟಿ ಪೂಜೆ, ನೃತ್ಯೋತ್ಸವ, ಮಂಗಳಾರತಿ, ಜ.16ರಂದು ಮಹಾಪೂಜೆ, ಸುತ್ತು ಬಲಿ, ಉಳಿಯಬೀಡಿನ ಕಟ್ಟೆ ಪೂಜೆ, ನೃತ್ಯೋತ್ಸವ, ಮಂಗಳಾರತಿ, ಜ.17ರಂದು ಬೆಳಿಗ್ಗೆ ಉಳಿಯಬೀಡಿನಿಂದ ಉಳ್ಳಾಲ್ತಿ ನಾಡದೈವಗಳ ಭಂಡಾರ ಬರುವುದು. ಬೆಳಿಗ್ಗೆ ಮಹಾಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಸುತ್ತುಬಲಿ, ಕೆಮನೋಡಿ ಕೆಟ್ಟಿ ಪೂಜೆ, ನೃತ್ಯೋತ್ಸವ, ಕವಾಟ ಬಂಧನ, ದೇವರ ಶಯನ, ಜ.18ರಂದು ಬೆಳಿಗ್ಗೆ ಗಣಹೋಮ, ಶುಭ ಮುಹೂರ್ತದಲ್ಲಿ ಕವಟೋದ್ಘಾಟನೆ, ತೈಲಾಭಿಷೇಕ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ದೇವರ ಅವಕೃತ, ಬಟ್ಟಲು ಕಾಣಿಕೆ, ಧ್ವಜಾವರೋಹಣ, ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಉಳ್ಳಾಳ್ತಿ ನಾಡದೈವಗಳ ನೇಮೋತ್ಸವ, ನಡೆಯಲಿದೆ.

ಜ.14 ರಂದು ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್, ಉಳಿಯಬೀಡು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಭಾಗವಹಿಸಲಿದ್ದಾರೆ. ರಾತ್ರಿ ಪಟ್ರಮೆ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮತ್ತು ಸುರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜ.15ರಂದು ಊರ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಜ.16ರಂದು ರಾತ್ರಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಗದಾಯುದ್ಧ” ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

Related posts

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!