July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಪಡಂಗಡಿ: ಮನೆಯಲ್ಲಿ ಯಾರು ಇಲ್ಲದ ಸಮಯ ಒಳನುಗ್ಗಿದ ಕಳ್ಳರು ಸುಮಾರು ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಜ.6ರಂದು ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ಬದ್ಯಾರು ಐಬಿ ರೆಸಿಡೆನ್ಸಿ ನಿವಾಸಿ ಇಸ್ಮಾಯಿಲ್ ಎಂಬವರು ಮನೆಯಲ್ಲಿ ಈ ಕಳ್ಳತನ ನಡೆದಿದೆ. ಜ.6ರಂದು ರಾತ್ರಿ 7 ಗಂಟೆಗೆ ಇಸ್ಮಾಯಿಲ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಮನೆಗೆ ಬೀಗ ಹಾಕಿ ಮೂಡಬಿದ್ರೆಗೆ ಕಾರ್ಯಕ್ರಮಕ್ಕೆ ಹೋದವರು ಮರಳಿ ರಾತ್ರಿ 11.50ಕ್ಕೆ ವಾಪಾಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇಸ್ಮಾಯಿಲ್ ಅವರು ಮೂಡಬಿದ್ರೆಗೆ ಹೋಗಿರುವುದನ್ನು ತಿಳಿದ ಯಾರೋ ಕಳ್ಳರು ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ಮನೆಯ ಹಿಂಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸಿ ಮನೆಯ ಬೆಡ್ ರೂಮಿನಲ್ಲಿದ್ದ ಕಪಾಟಿನ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ 24 ಗ್ರಾಂ ತೂಕದ 2 ಚಿನ್ನದ ಬಳೆ, 20ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ, ೪ಗ್ರಾಂ ತೂಕದ ಬ್ರಾಸ್‌ಲೈಟ್-1, ಮೂರು ಗ್ರಾಂ ತೂಕದ 2 ಉಂಗುರ, ಒಂದೂವರೆ ಗ್ರಾಂ 1 ಉಂಗುರ, 4 ಗ್ರಾಂ ತೂಕದ ಕಿವಿಯ ಓಲೆ ಸೇರಿದಂತೆ ಒಟ್ಟು 83.5 ಗ್ರಾಂ ತೂಕದ ಚಿನ್ನಭಾರಣ ಕಳವುಗೈದಿದ್ದು, ಇದರ ಮೌಲ್ಯ 9,50,೦೦೦ ಎಂದು ಅಂದಾಜಿಸಲಾಗಿದೆ. ಜೊತೆಗೆ ಕಪಾಟಿನಲ್ಲಿದ್ದ ರೂ.25,೦೦೦ ನಗದು ಹಣ ಕಳವು ಮಾಡಿವುದಾಗಿ ವರದಿಯಾಗಿದೆ.

Related posts

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
error: Content is protected !!