25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಪಡಂಗಡಿ: ಮನೆಯಲ್ಲಿ ಯಾರು ಇಲ್ಲದ ಸಮಯ ಒಳನುಗ್ಗಿದ ಕಳ್ಳರು ಸುಮಾರು ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಜ.6ರಂದು ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ಬದ್ಯಾರು ಐಬಿ ರೆಸಿಡೆನ್ಸಿ ನಿವಾಸಿ ಇಸ್ಮಾಯಿಲ್ ಎಂಬವರು ಮನೆಯಲ್ಲಿ ಈ ಕಳ್ಳತನ ನಡೆದಿದೆ. ಜ.6ರಂದು ರಾತ್ರಿ 7 ಗಂಟೆಗೆ ಇಸ್ಮಾಯಿಲ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಮನೆಗೆ ಬೀಗ ಹಾಕಿ ಮೂಡಬಿದ್ರೆಗೆ ಕಾರ್ಯಕ್ರಮಕ್ಕೆ ಹೋದವರು ಮರಳಿ ರಾತ್ರಿ 11.50ಕ್ಕೆ ವಾಪಾಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇಸ್ಮಾಯಿಲ್ ಅವರು ಮೂಡಬಿದ್ರೆಗೆ ಹೋಗಿರುವುದನ್ನು ತಿಳಿದ ಯಾರೋ ಕಳ್ಳರು ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ಮನೆಯ ಹಿಂಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸಿ ಮನೆಯ ಬೆಡ್ ರೂಮಿನಲ್ಲಿದ್ದ ಕಪಾಟಿನ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ 24 ಗ್ರಾಂ ತೂಕದ 2 ಚಿನ್ನದ ಬಳೆ, 20ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ, ೪ಗ್ರಾಂ ತೂಕದ ಬ್ರಾಸ್‌ಲೈಟ್-1, ಮೂರು ಗ್ರಾಂ ತೂಕದ 2 ಉಂಗುರ, ಒಂದೂವರೆ ಗ್ರಾಂ 1 ಉಂಗುರ, 4 ಗ್ರಾಂ ತೂಕದ ಕಿವಿಯ ಓಲೆ ಸೇರಿದಂತೆ ಒಟ್ಟು 83.5 ಗ್ರಾಂ ತೂಕದ ಚಿನ್ನಭಾರಣ ಕಳವುಗೈದಿದ್ದು, ಇದರ ಮೌಲ್ಯ 9,50,೦೦೦ ಎಂದು ಅಂದಾಜಿಸಲಾಗಿದೆ. ಜೊತೆಗೆ ಕಪಾಟಿನಲ್ಲಿದ್ದ ರೂ.25,೦೦೦ ನಗದು ಹಣ ಕಳವು ಮಾಡಿವುದಾಗಿ ವರದಿಯಾಗಿದೆ.

Related posts

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya
error: Content is protected !!