September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ.

ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದನ್ನು ಸಾರ್ವಜನಿಕರು ಕಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ತಂಡ ರಾತ್ರಿ 9:45 ಗಂಟೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ನಡೆಸಿದೆ ಅಲ್ಲದೇ ಎರಡು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲು ತಿರ್ಮಾನಿಸಿದ್ದಾರೆ. ಚಿರತೆ ಸಂಜೆ ವೇಳೆಗೆ ಕೂಗು ಶಬ್ದವನ್ನು ಕೆಲ ಮಂದಿ ಕೇಳಿದ್ದು ಕಳೆದ ಹಲವು ದಿನಗಳಿಂದ ಚಿರತೆ ಈ ಪ್ರದೇಶದಲ್ಲಿ ಸುತ್ತಾಡುತ್ತಿದೆ ಅಲ್ಲದೇ ಒಂದೇ ನಿರ್ದಿಷ್ಟ ಸ್ಥಳದಲ್ಲಿ ಚಿರತೆ ಇರಾದ ಕಾರಣ ಬೋನ್ ಇರಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಹೈರಾಣಿಸಿದೆ. ಈ ಸಂದರ್ಭದಲ್ಲಿ ಅರಣ್ಯ ಪಾಲಕ ನಾಗಲಿಂಗಪ್ಪ ಡಿ., ವಾಹನ ಚಾಲಕ ಕಿಶೋರ್ ಕುಮಾರ್ ಹಾಗೂ ಸ್ಥಳೀಯರಾದ ವಿಜಯ್ ಪುಪಾಡಿಕಲ್ಲು, ಪುರಂದರ ಕಜೆ, ಪತ್ರಕರ್ತ ಮನೀಶ್ ವಿ.ಅಂಚನ್ ಪಾಲೇದು ಮತ್ತಿತರು ಉಪಸ್ಥಿತರಿದ್ದರು.

Related posts

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya
error: Content is protected !!