26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ.

ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದನ್ನು ಸಾರ್ವಜನಿಕರು ಕಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ತಂಡ ರಾತ್ರಿ 9:45 ಗಂಟೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ನಡೆಸಿದೆ ಅಲ್ಲದೇ ಎರಡು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲು ತಿರ್ಮಾನಿಸಿದ್ದಾರೆ. ಚಿರತೆ ಸಂಜೆ ವೇಳೆಗೆ ಕೂಗು ಶಬ್ದವನ್ನು ಕೆಲ ಮಂದಿ ಕೇಳಿದ್ದು ಕಳೆದ ಹಲವು ದಿನಗಳಿಂದ ಚಿರತೆ ಈ ಪ್ರದೇಶದಲ್ಲಿ ಸುತ್ತಾಡುತ್ತಿದೆ ಅಲ್ಲದೇ ಒಂದೇ ನಿರ್ದಿಷ್ಟ ಸ್ಥಳದಲ್ಲಿ ಚಿರತೆ ಇರಾದ ಕಾರಣ ಬೋನ್ ಇರಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಹೈರಾಣಿಸಿದೆ. ಈ ಸಂದರ್ಭದಲ್ಲಿ ಅರಣ್ಯ ಪಾಲಕ ನಾಗಲಿಂಗಪ್ಪ ಡಿ., ವಾಹನ ಚಾಲಕ ಕಿಶೋರ್ ಕುಮಾರ್ ಹಾಗೂ ಸ್ಥಳೀಯರಾದ ವಿಜಯ್ ಪುಪಾಡಿಕಲ್ಲು, ಪುರಂದರ ಕಜೆ, ಪತ್ರಕರ್ತ ಮನೀಶ್ ವಿ.ಅಂಚನ್ ಪಾಲೇದು ಮತ್ತಿತರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya
error: Content is protected !!