July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ಜ.8 ರಂದು ನಡೆದಿದೆ.

ಪಾಲೇದು ಪರಿಸರದ ಮಡಪ್ಪಾಡಿ ಗೇಟು, ಕಜೆ, ಕಂಡಂಬರಪಲ್ಕೆ, ಎರುಕಲ್ಲು ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದನ್ನು ಸಾರ್ವಜನಿಕರು ಕಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ತಂಡ ರಾತ್ರಿ 9:45 ಗಂಟೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ನಡೆಸಿದೆ ಅಲ್ಲದೇ ಎರಡು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲು ತಿರ್ಮಾನಿಸಿದ್ದಾರೆ. ಚಿರತೆ ಸಂಜೆ ವೇಳೆಗೆ ಕೂಗು ಶಬ್ದವನ್ನು ಕೆಲ ಮಂದಿ ಕೇಳಿದ್ದು ಕಳೆದ ಹಲವು ದಿನಗಳಿಂದ ಚಿರತೆ ಈ ಪ್ರದೇಶದಲ್ಲಿ ಸುತ್ತಾಡುತ್ತಿದೆ ಅಲ್ಲದೇ ಒಂದೇ ನಿರ್ದಿಷ್ಟ ಸ್ಥಳದಲ್ಲಿ ಚಿರತೆ ಇರಾದ ಕಾರಣ ಬೋನ್ ಇರಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಹೈರಾಣಿಸಿದೆ. ಈ ಸಂದರ್ಭದಲ್ಲಿ ಅರಣ್ಯ ಪಾಲಕ ನಾಗಲಿಂಗಪ್ಪ ಡಿ., ವಾಹನ ಚಾಲಕ ಕಿಶೋರ್ ಕುಮಾರ್ ಹಾಗೂ ಸ್ಥಳೀಯರಾದ ವಿಜಯ್ ಪುಪಾಡಿಕಲ್ಲು, ಪುರಂದರ ಕಜೆ, ಪತ್ರಕರ್ತ ಮನೀಶ್ ವಿ.ಅಂಚನ್ ಪಾಲೇದು ಮತ್ತಿತರು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya
error: Content is protected !!