July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

ಅರಸಿನಮಕ್ಕಿ: ಮೂಲ್ಯರ ಯಾನೆ ಕುಲಾಲರ ಕೂಟದ ೩೧ನೇ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ಜ.11ರಂದು ಅರಸಿನಮಕ್ಕಿ ಕುಂಭಶ್ರೀ ಚಾವಡಿಯಲ್ಲಿ ನಡೆಯಲಿರುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷ ಕೆ. ಗಂಗಾಧರ ಕುಲಾಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಡೆಪ್ಯುಟಿ ಕಮಾಂಡೆಂಟ್ ಚಂದಪ್ಪ ಮೂಲ್ಯ ಡಿ., ಸಾಹಿತಿ, ಯಕ್ಷಗಾನ ಕಲಾವಿದ ಮಹೇಶ್ ಕುಲಾಲ್ ಅರ್ತಿಮೂಲೆ, ತಾಲೂಕು ತುಳುನಾಡ ಒಕ್ಕೂಟದ ಅಧ್ಯಕ್ಷ ರಾಜೇಶ್ ಕುಲಾಲ್ ಬೈರೊಟ್ಟು, ಅರಸಿನಮಕ್ಕಿ ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಮಂಜುಳಾ, ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ವಿಭಾಗೀಯ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ಕಾಯರ್ತಡ್ಕ ಕುಂಭಶ್ರೀ ಗೆಳೆಯರ ಬಳಗದ ಗೌರವಾಧ್ಯಕ್ಷ ವಿಜಯ್ ಕೆ., ಮಂಗಳೂರು ಪೊಲೀಸ್ ಇಲಾಖೆಯ ರಾಧಾಕೃಷ್ಣ ಕುಲಾಲ್ ಪಾಣಾಜೆ, ಚಾರ್ಮಾಡಿ ಪಂಚಶ್ರೀ ಕಲಾಕೂಟದ ಅಧ್ಯಕ್ಷ, ರಂಗ ಕಲಾವಿದ ಶ್ರೀನಿವಾಸ ಕುಲಾಲ್ ಕಕ್ಕಿಂಜೆ ಭಾಗವಹಿಸಲಿದ್ದಾರೆ.

ಕೊಕ್ಕಡ ಪಂಚಮಿ ಹಿತಾಯುರ್ಧಾಮದ ಹಿರಿಯ ವೈದ್ಯ ಡಾ| ಮೋಹನದಾಸ ಗೌಡ ಕೊಕ್ಕಡ ಇವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಮಧ್ಯಾಹ್ನ ಹವ್ಯಾಸಿ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

Related posts

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!