24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.11: ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

ಅರಸಿನಮಕ್ಕಿ: ಮೂಲ್ಯರ ಯಾನೆ ಕುಲಾಲರ ಕೂಟದ ೩೧ನೇ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ಜ.11ರಂದು ಅರಸಿನಮಕ್ಕಿ ಕುಂಭಶ್ರೀ ಚಾವಡಿಯಲ್ಲಿ ನಡೆಯಲಿರುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷ ಕೆ. ಗಂಗಾಧರ ಕುಲಾಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಡೆಪ್ಯುಟಿ ಕಮಾಂಡೆಂಟ್ ಚಂದಪ್ಪ ಮೂಲ್ಯ ಡಿ., ಸಾಹಿತಿ, ಯಕ್ಷಗಾನ ಕಲಾವಿದ ಮಹೇಶ್ ಕುಲಾಲ್ ಅರ್ತಿಮೂಲೆ, ತಾಲೂಕು ತುಳುನಾಡ ಒಕ್ಕೂಟದ ಅಧ್ಯಕ್ಷ ರಾಜೇಶ್ ಕುಲಾಲ್ ಬೈರೊಟ್ಟು, ಅರಸಿನಮಕ್ಕಿ ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಮಂಜುಳಾ, ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ವಿಭಾಗೀಯ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ಕಾಯರ್ತಡ್ಕ ಕುಂಭಶ್ರೀ ಗೆಳೆಯರ ಬಳಗದ ಗೌರವಾಧ್ಯಕ್ಷ ವಿಜಯ್ ಕೆ., ಮಂಗಳೂರು ಪೊಲೀಸ್ ಇಲಾಖೆಯ ರಾಧಾಕೃಷ್ಣ ಕುಲಾಲ್ ಪಾಣಾಜೆ, ಚಾರ್ಮಾಡಿ ಪಂಚಶ್ರೀ ಕಲಾಕೂಟದ ಅಧ್ಯಕ್ಷ, ರಂಗ ಕಲಾವಿದ ಶ್ರೀನಿವಾಸ ಕುಲಾಲ್ ಕಕ್ಕಿಂಜೆ ಭಾಗವಹಿಸಲಿದ್ದಾರೆ.

ಕೊಕ್ಕಡ ಪಂಚಮಿ ಹಿತಾಯುರ್ಧಾಮದ ಹಿರಿಯ ವೈದ್ಯ ಡಾ| ಮೋಹನದಾಸ ಗೌಡ ಕೊಕ್ಕಡ ಇವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಮಧ್ಯಾಹ್ನ ಹವ್ಯಾಸಿ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

Related posts

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya
error: Content is protected !!