ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

ಬೆಳ್ತಂಗಡಿ: ನಾರಾವಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ವತಿಯಿಂದ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171 ನೇ ವರ್ಷದ ಗುರು ಜಯಂತಿ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಾರಾವಿ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಜ.11 ರಂದು ನಡೆಯಲಿದೆ.


ಜ.11 ರಂದು ಭಜನೆ, ಗುರು ಪೂಜೆ, ಸಹಿತ ವೈದಿಕ ಕಾರ್ಯಕ್ರಮಗಳು ಮೂಡುಕೋಡಿ ಗಣೇಶ್ ನಾರಾಯಣ ಪಂಡಿತ್ ನೇತೃತ್ವದಲ್ಲಿ ನಡೆಯಲಿದೆ.


ಧಾರ್ಮಿಕ ಸಭೆ: ಬೆಂಗಳೂರು ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಪೀಠಾಧಿಪತಿ ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಗುರುಪೀಠ ಉದ್ಘಾಟಿಸಿ ಆರ್ಶೀವಚನ ನೀಡಲಿರುವರು. ಶಾಸಕ ಹರೀಶ್ ಪೂಂಜ ಹಾಗೂ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭಜನಾ ಮಂದಿರ ಉದ್ಘಾಟಿಸುವರು. ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ ಹಾಗೂ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ದೀಪ ಪ್ರಜ್ವಲನೆ ಮಾಡಲಿರುವರು. ಸಂಘದ ಅಧ್ಯಕ್ಷ ರಾಜೇಶ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಸತ್ಯಜಿತ್ ಸುರತ್ಕಲ್, ಶಾಸಕರಾದ ಸುನೀಲ್ ಕುಮಾರ್, ಉಮಾನಾಥ ಕೋಟ್ಯಾನ್, ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್, ಎಂಎಲ್ಸಿ ಮಂಜುನಾಥ ಭಂಡಾರಿ, ಪ್ರತಿಭಾ ಕುಳಾಯಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಊರವರು ಉಪಸ್ಥಿತರಿದ್ದರು.
ಸಾಮಾಜಿಕ ಕ್ಷೇತ್ರದಲ್ಲಿ ಸತೀಶ್ ಕೆ.ಕಾಶಿಪಟ್ಣ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ದೀಕ್ಷಿತಾ ಯೋಗೀಶ್ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪ್ರತೀಕ್ಷಾ ನಾರಾವಿ ಅವರನ್ನು ಸನ್ಮಾನಿಸಲಾಗುವುದು ಎಂದು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಜಯ ಪೂಜಾರಿ ತಿಳಿಸಿದ್ದಾರೆ.

Related posts

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya
error: Content is protected !!