27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಕಾರ್ಯಕ್ರಮ: ಜ.14ರಂದು ಬೆಳಿಗ್ಗೆ ತೋರಣ ಮುಹೂರ್ತ, ಸಂಜೆ ಧ್ವಜಾರೋಹಣ ಸುತ್ತು ಬಲಿ, ಮಹಾಪೂಜೆ, ಜ.15 ರಂದು ಮಹಾಪೂಜೆ, ಸುತ್ತು ಬಲಿ, ಪೆರ್ಲೆಕಟ್ಟಿ ಪೂಜೆ, ನೃತ್ಯೋತ್ಸವ, ಮಂಗಳಾರತಿ, ಜ.16ರಂದು ಮಹಾಪೂಜೆ, ಸುತ್ತು ಬಲಿ, ಉಳಿಯಬೀಡಿನ ಕಟ್ಟೆ ಪೂಜೆ, ನೃತ್ಯೋತ್ಸವ, ಮಂಗಳಾರತಿ, ಜ.17ರಂದು ಬೆಳಿಗ್ಗೆ ಉಳಿಯಬೀಡಿನಿಂದ ಉಳ್ಳಾಲ್ತಿ ನಾಡದೈವಗಳ ಭಂಡಾರ ಬರುವುದು. ಬೆಳಿಗ್ಗೆ ಮಹಾಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಸುತ್ತುಬಲಿ, ಕೆಮನೋಡಿ ಕೆಟ್ಟಿ ಪೂಜೆ, ನೃತ್ಯೋತ್ಸವ, ಕವಾಟ ಬಂಧನ, ದೇವರ ಶಯನ, ಜ.18ರಂದು ಬೆಳಿಗ್ಗೆ ಗಣಹೋಮ, ಶುಭ ಮುಹೂರ್ತದಲ್ಲಿ ಕವಟೋದ್ಘಾಟನೆ, ತೈಲಾಭಿಷೇಕ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ದೇವರ ಅವಕೃತ, ಬಟ್ಟಲು ಕಾಣಿಕೆ, ಧ್ವಜಾವರೋಹಣ, ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಉಳ್ಳಾಳ್ತಿ ನಾಡದೈವಗಳ ನೇಮೋತ್ಸವ, ನಡೆಯಲಿದೆ.

ಜ.14 ರಂದು ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್, ಉಳಿಯಬೀಡು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಭಾಗವಹಿಸಲಿದ್ದಾರೆ. ರಾತ್ರಿ ಪಟ್ರಮೆ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮತ್ತು ಸುರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜ.15ರಂದು ಊರ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಜ.16ರಂದು ರಾತ್ರಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಗದಾಯುದ್ಧ” ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

Related posts

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya
error: Content is protected !!