July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಪಡಂಗಡಿ: ಮನೆಯಲ್ಲಿ ಯಾರು ಇಲ್ಲದ ಸಮಯ ಒಳನುಗ್ಗಿದ ಕಳ್ಳರು ಸುಮಾರು ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಜ.6ರಂದು ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ಬದ್ಯಾರು ಐಬಿ ರೆಸಿಡೆನ್ಸಿ ನಿವಾಸಿ ಇಸ್ಮಾಯಿಲ್ ಎಂಬವರು ಮನೆಯಲ್ಲಿ ಈ ಕಳ್ಳತನ ನಡೆದಿದೆ. ಜ.6ರಂದು ರಾತ್ರಿ 7 ಗಂಟೆಗೆ ಇಸ್ಮಾಯಿಲ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಮನೆಗೆ ಬೀಗ ಹಾಕಿ ಮೂಡಬಿದ್ರೆಗೆ ಕಾರ್ಯಕ್ರಮಕ್ಕೆ ಹೋದವರು ಮರಳಿ ರಾತ್ರಿ 11.50ಕ್ಕೆ ವಾಪಾಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇಸ್ಮಾಯಿಲ್ ಅವರು ಮೂಡಬಿದ್ರೆಗೆ ಹೋಗಿರುವುದನ್ನು ತಿಳಿದ ಯಾರೋ ಕಳ್ಳರು ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ಮನೆಯ ಹಿಂಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸಿ ಮನೆಯ ಬೆಡ್ ರೂಮಿನಲ್ಲಿದ್ದ ಕಪಾಟಿನ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ 24 ಗ್ರಾಂ ತೂಕದ 2 ಚಿನ್ನದ ಬಳೆ, 20ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ, ೪ಗ್ರಾಂ ತೂಕದ ಬ್ರಾಸ್‌ಲೈಟ್-1, ಮೂರು ಗ್ರಾಂ ತೂಕದ 2 ಉಂಗುರ, ಒಂದೂವರೆ ಗ್ರಾಂ 1 ಉಂಗುರ, 4 ಗ್ರಾಂ ತೂಕದ ಕಿವಿಯ ಓಲೆ ಸೇರಿದಂತೆ ಒಟ್ಟು 83.5 ಗ್ರಾಂ ತೂಕದ ಚಿನ್ನಭಾರಣ ಕಳವುಗೈದಿದ್ದು, ಇದರ ಮೌಲ್ಯ 9,50,೦೦೦ ಎಂದು ಅಂದಾಜಿಸಲಾಗಿದೆ. ಜೊತೆಗೆ ಕಪಾಟಿನಲ್ಲಿದ್ದ ರೂ.25,೦೦೦ ನಗದು ಹಣ ಕಳವು ಮಾಡಿವುದಾಗಿ ವರದಿಯಾಗಿದೆ.

Related posts

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya
error: Content is protected !!