23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಪಡಂಗಡಿ: ಮನೆಯಲ್ಲಿ ಯಾರು ಇಲ್ಲದ ಸಮಯ ಒಳನುಗ್ಗಿದ ಕಳ್ಳರು ಸುಮಾರು ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಜ.6ರಂದು ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ಬದ್ಯಾರು ಐಬಿ ರೆಸಿಡೆನ್ಸಿ ನಿವಾಸಿ ಇಸ್ಮಾಯಿಲ್ ಎಂಬವರು ಮನೆಯಲ್ಲಿ ಈ ಕಳ್ಳತನ ನಡೆದಿದೆ. ಜ.6ರಂದು ರಾತ್ರಿ 7 ಗಂಟೆಗೆ ಇಸ್ಮಾಯಿಲ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಮನೆಗೆ ಬೀಗ ಹಾಕಿ ಮೂಡಬಿದ್ರೆಗೆ ಕಾರ್ಯಕ್ರಮಕ್ಕೆ ಹೋದವರು ಮರಳಿ ರಾತ್ರಿ 11.50ಕ್ಕೆ ವಾಪಾಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇಸ್ಮಾಯಿಲ್ ಅವರು ಮೂಡಬಿದ್ರೆಗೆ ಹೋಗಿರುವುದನ್ನು ತಿಳಿದ ಯಾರೋ ಕಳ್ಳರು ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ಮನೆಯ ಹಿಂಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸಿ ಮನೆಯ ಬೆಡ್ ರೂಮಿನಲ್ಲಿದ್ದ ಕಪಾಟಿನ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ 24 ಗ್ರಾಂ ತೂಕದ 2 ಚಿನ್ನದ ಬಳೆ, 20ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ, ೪ಗ್ರಾಂ ತೂಕದ ಬ್ರಾಸ್‌ಲೈಟ್-1, ಮೂರು ಗ್ರಾಂ ತೂಕದ 2 ಉಂಗುರ, ಒಂದೂವರೆ ಗ್ರಾಂ 1 ಉಂಗುರ, 4 ಗ್ರಾಂ ತೂಕದ ಕಿವಿಯ ಓಲೆ ಸೇರಿದಂತೆ ಒಟ್ಟು 83.5 ಗ್ರಾಂ ತೂಕದ ಚಿನ್ನಭಾರಣ ಕಳವುಗೈದಿದ್ದು, ಇದರ ಮೌಲ್ಯ 9,50,೦೦೦ ಎಂದು ಅಂದಾಜಿಸಲಾಗಿದೆ. ಜೊತೆಗೆ ಕಪಾಟಿನಲ್ಲಿದ್ದ ರೂ.25,೦೦೦ ನಗದು ಹಣ ಕಳವು ಮಾಡಿವುದಾಗಿ ವರದಿಯಾಗಿದೆ.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
error: Content is protected !!