ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಪಡಂಗಡಿ: ಮನೆಯಲ್ಲಿ ಯಾರು ಇಲ್ಲದ ಸಮಯ ಒಳನುಗ್ಗಿದ ಕಳ್ಳರು ಸುಮಾರು ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಜ.6ರಂದು ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ಬದ್ಯಾರು ಐಬಿ ರೆಸಿಡೆನ್ಸಿ ನಿವಾಸಿ ಇಸ್ಮಾಯಿಲ್ ಎಂಬವರು ಮನೆಯಲ್ಲಿ ಈ ಕಳ್ಳತನ ನಡೆದಿದೆ. ಜ.6ರಂದು ರಾತ್ರಿ 7 ಗಂಟೆಗೆ ಇಸ್ಮಾಯಿಲ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಮನೆಗೆ ಬೀಗ ಹಾಕಿ ಮೂಡಬಿದ್ರೆಗೆ ಕಾರ್ಯಕ್ರಮಕ್ಕೆ ಹೋದವರು ಮರಳಿ ರಾತ್ರಿ 11.50ಕ್ಕೆ ವಾಪಾಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇಸ್ಮಾಯಿಲ್ ಅವರು ಮೂಡಬಿದ್ರೆಗೆ ಹೋಗಿರುವುದನ್ನು ತಿಳಿದ ಯಾರೋ ಕಳ್ಳರು ಮನೆಯಲ್ಲಿ ಯಾರೂ ಇಲ್ಲದಿರುವ ಸಮಯ ಮನೆಯ ಹಿಂಬಾಗಿಲ ಚಿಲಕ ಮುರಿದು ಒಳ ಪ್ರವೇಶಿಸಿ ಮನೆಯ ಬೆಡ್ ರೂಮಿನಲ್ಲಿದ್ದ ಕಪಾಟಿನ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ 24 ಗ್ರಾಂ ತೂಕದ 2 ಚಿನ್ನದ ಬಳೆ, 20ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ, ೪ಗ್ರಾಂ ತೂಕದ ಬ್ರಾಸ್‌ಲೈಟ್-1, ಮೂರು ಗ್ರಾಂ ತೂಕದ 2 ಉಂಗುರ, ಒಂದೂವರೆ ಗ್ರಾಂ 1 ಉಂಗುರ, 4 ಗ್ರಾಂ ತೂಕದ ಕಿವಿಯ ಓಲೆ ಸೇರಿದಂತೆ ಒಟ್ಟು 83.5 ಗ್ರಾಂ ತೂಕದ ಚಿನ್ನಭಾರಣ ಕಳವುಗೈದಿದ್ದು, ಇದರ ಮೌಲ್ಯ 9,50,೦೦೦ ಎಂದು ಅಂದಾಜಿಸಲಾಗಿದೆ. ಜೊತೆಗೆ ಕಪಾಟಿನಲ್ಲಿದ್ದ ರೂ.25,೦೦೦ ನಗದು ಹಣ ಕಳವು ಮಾಡಿವುದಾಗಿ ವರದಿಯಾಗಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya
error: Content is protected !!